News Karnataka Kannada
Friday, May 03 2024
ಮಂಗಳೂರು

ಬಂಟ್ವಾಳ: ವೀರರಾಣಿ ಅಬ್ಬಕ್ಕ ಪ್ರತಿಮೆ ಅನಾವರಣ

Bantwal
Photo Credit :
ಬಂಟ್ವಾಳ: ವೀರರಾಣಿ ಅಬ್ಬಕ್ಕ ದೇಶದ ಚರಿತ್ರೆಗೆ ವಿಶೇಷ ಕೊಡುಗೆಯನ್ನು ನೀಡಿದ್ದು, ಆಕೆಯನ್ನು ಇಡೀ ದೇಶಕ್ಕೆ ಪರಿಚಯಿಸುವ ಕಾರ್ಯವನ್ನು ಸರಕಾರಗಳು ಮಾಡಬೇಕಿದೆ ಎಂದು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಎನ್.ಸಂತೋಷ್ ಹೆಗ್ಡೆ ಹೇಳಿದರು.

ಅವರು  ಬಿ.ಸಿ.ರೋಡಿನ ಸಂಚಯಗಿರಿಯಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಹಾಗೂ ತುಳು ಬದುಕು ವಸ್ತು ಸಂಗ್ರಹಾಲಯದಲ್ಲಿ ರಾಣಿ ಅಬ್ಬಕ್ಕ ಪ್ರತಿಮೆ ಅನಾವರಣ ಮಾಡಿ ಮಾತನಾಡಿದರು.

ತುಳು ಭಾಷೆ, ಅಬ್ಬಕ್ಕನ ವಿಚಾರವನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಇಂತಹ ಕೇಂದ್ರ ಸ್ಥಾಪಿಸಿರುವ ತುಕರಾಮ್ ಪೂಜಾರಿಯವರ ಪ್ರಯತ್ನ ಅದ್ಬುತವಾದುದು ಎಂದರು.

ಬೆಂಗಳೂರಿನ ಚಾರ್ಟಡ್ ಹೌಸಿಂಗ್‌ನ ಏರ್ಯ ಬಾಲಕೃಷ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿ ಹೊಸದಿಲ್ಲಿ ಭಾರತೀಯ ಜೈನ್ ಮಿಲನ್‌ನ ಉಪಾಧ್ಯಕ್ಷೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಅನಿತಾ ಸುರೇಂದ್ರಕುಮಾರ್ ಮಾತನಾಡಿ, ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ತುಳುನಾಡಿನ ವೀರ ರಾಣಿ ಅಬ್ಬಕ್ಕ ಹೆಸರಿನಲ್ಲಿ ಇಂತಹ ಕೇಂದ್ರ ಸ್ಥಾಪಿಸಿರುವ ಸಾಹಸ ಮೆಚ್ಚುವಂತದ್ದಾಗಿದೆ. ಅಬ್ಬಕ್ಕ ಪ್ರತಿಮೆಯ ಮೂಲಕ ಕೇಂದ್ರಕ್ಕೆ ಇನ್ನೂ ಹೆಚ್ಚಿನ ಗೌರವ ಬಂದಿದೆ ಎಂದರು.

ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ| ತುಕಾರಾಮ್ ಪೂಜಾರಿ ಅವರು ಸ್ವಾಗತದೊಂದಿಗೆ ಪ್ರಸ್ತಾವಿಕವಾಗಿ ಮಾತನಾಡಿ, ಈ ಕೇಂದ್ರವು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಪನ್ಮೂಲ ಕೇಂದ್ರವಾಗಿ ಬೆಳೆಯುತ್ತಿದ್ದು, ಸರಳ ಸಾತ್ವಿಕ ಸ್ವಭಾವದ ವೀರರಾಣಿ ಅಬ್ಬಕ್ಕಳ ಹೆಸರು ಮತ್ತು ಸಾಧನೆಯನ್ನು ಜಗತ್ತಿಗೆ ಸಾರುವ ಕೆಲಸ ನಡೆಯುತ್ತಿದೆ ಎಂದರು.

ಕೇಂದ್ರದ ಕಾರ್ಯದರ್ಶಿ ಡಾ| ಆಶಾಲತಾ ಎಸ್.ಸುವರ್ಣ ವಂದಿಸಿದರು. ಡಾ| ಆರ್.ನರಸಿಂಹಮೂರ್ತಿ ಕಾರ್ಯಕ್ರಮ ನಿರ್ವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು