ಬಂಟ್ವಾಳ : ಬಂಟ್ವಾಳ ಬೈಪಾಸ್ ಜಂಕ್ಷನ್ ನಲ್ಲಿ ಕೇಂದ್ರ ಕಛೇರಿಯನ್ನು ಹೊಂದಿರುವ ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ 14ನೇ ಸಿದ್ಧಕಟ್ಟೆ ಶಾಖೆಯ ಜ.14 ರಂದು ಸಿದ್ಧಕಟ್ಟೆಯ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ಹೇಳಿದರು.
ಬ್ಯಾಂಕಿನ ಸಭಾಂಗಣದಲ್ಲಿ ಸೋಮವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್ 13 ಶಾಖೆಗಳನ್ನು ಹೊಂದಿದ್ದು, ಗ್ರಾಹಕರಿಗೆ ಉತ್ತಮಬ್ಯಾಂಕಿಂಗ್ ಸೇವಾ ಸೌಲಭ್ಯಗಳನ್ನು ನೀಡುತ್ತಾ ಬಂದಿದೆ. ಪ್ರಸ್ತುತ ನೂತನ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿಯವರು ಸೀಪ ಪ್ರಜ್ವಲನೆನಡೆಸಿ ಆಶೀರ್ವಚನ ನೀಡುವರು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟನೆ ನೆರವೇರಿಸುವರು.
ಸಿದ್ಧಕಟ್ಟೆ ಸೈಂಟ್ ಪ್ಯಾಟ್ರಿಕ್ ಚರ್ಚ್ನ ಧರ್ಮಗುರು ಫಾ ಡೇನಿಯಲ್ ಡಿ’ಸೋಜ, ಶ್ರೀಕ್ಷೇತ್ರ ಪೂಂಜದ ಧರ್ಮದರ್ಶಿ ಕೃಷ್ಣಪ್ರಸಾದ್ ಅಸ್ರಣ್ಣ,ಸಿದ್ದಕಟ್ಟೆ ಕಲ್ಕುರಿ ಜುಮ್ಮಾ ಮಸೀದಿ ಧರ್ಮಗುರು ಗೌಸ್ ಮೊಯ್ಯದ್ದಿನ್ ಪೈಝಿ, ಸಂಗಬೆಟ್ಟು ವೀರಭದ್ರೇಶ್ವರ ದೇವಸ್ಥಾನದ ಚಂದ್ರಹಾಸ ಗುರಿಕಾರ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬಂಟ್ಬಾಳ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಭದ್ರತಾ ಕೊಠಡಿ ಉದ್ಘಾಟಿಸುವರು, ಸಂಸದ ನಳಿನ್ ಕುಮಾರ್ ಕಟೀಲು ಕಂಪ್ಯೂಟರ್ ಉದ್ಘಾಟಿಸುವರು, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇಫ್ ಲಾಕರ್ ಉದ್ಘಾಟಿಸುವರು , ಮಾಜಿಸಚಿವ ರಮಾನಾಥ ರೈ ಸ್ವಸಹಾಯ ಗುಂಪುಗಳನ್ನುಗುರುತಿಸಲಿದ್ದಾರೆ, ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಕಾಶ್ ರಾವ್ ಠೇವಣಿಪತ್ರ ಬಿಡುಗಡೆಗೊಳಿಸುವರು ಎಂದು ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಭೋಜಮೂಲ್ಯ ವಿವರಿಸಿದರು.
ಉಪಾಧ್ಯಕ್ಷ ಪದ್ಮನಾಭ ವಿ., ಶಾಖಾ ವ್ಯವಸ್ಥಾಪಕಿ ಶೀಲಾವತಿ, ಆಡಳಿತ ಮಂಡಳಿ ಸದಸ್ಯರಾದ ವಿಶ್ವನಾಥ ಕೆ.ಬಿ. ರಮೇಶ್ ಸಾಲ್ಯಾನ್, ಅರುಣ್ ಕುಮಾರ್ ಕೆ., ಬಿ. ರಮೇಶ್ ಸಾಲ್ಯಾನ್, ನಾಗೇಶ್ ಬಿ., ಎಂ. ವಾಮನ ಟೈಲರ್, ಸುರೇಶ್ ಎನ್, ಸತೀಶ, ವಿ. ವಿಜಯ ಕುಮಾರ್, ಜಯಂತಿ, ವಿದ್ಯಾ, ಜನಾರ್ಧನ ಬೊಂಡಾಲ, ಜಗನ್ನಿವಾಸ ಗೌಡ, ಎಂ. ಕೆ. ಗಣೇಶ ಸಮಗಾರ, ವಿಜಯಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು.