News Karnataka Kannada
Wednesday, May 01 2024
ಮಂಗಳೂರು

ಬಂಟ್ವಾಳ: ಸಿಡಿಲಿನ ಅಬ್ಬರಕ್ಕೆ ಮನೆ ಗೋಡೆ ಹಾಗೂ ಹಂಚು ಹಾನಿ

Rain
Photo Credit : News Kannada

ಬಂಟ್ವಾಳ :  ತಾಲೂಕಿನಾದ್ಯಂತ ಬುಧವಾರ ಸಂಜೆಯಿಂದ ಭಾರೀ ಗಾಳಿಮಳೆಯಾಗಿದ್ದು, ಸಿಡಿಲಿನ ಅಬ್ಬರಕ್ಕೆ ವಿವಿಧೆಡೆ ಹಾನಿ ಸಂಭವಿಸಿದೆ. ಮಂಚಿ ಗ್ರಾಮದ ಕೇಪಳಗುರಿ ಎಂಬಲ್ಲಿ ಜಯಶ್ರೀ ಆಚಾರಿ ಅವರ ಮನೆ ಗೋಡೆ ಹಾಗೂ ಹಂಚು ಹಾನಿಯಾಗಿದ್ದು ಮಳೆಗೆ ಮನೆ ಸಂಪೂರ್ಣ ಕುಸಿಯುವ ಸಂಭವವಿದೆ.

ಮಂಚಿ ಗ್ರಾಮದ ಕುಕ್ಕಾಜೆ ಎಂಬಲ್ಲಿ ಆಯಿಷ ಎಂಬವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸಂಪರ್ಕ ಮತ್ತು ಗೋಡೆಗೆ ಹಾನಿ ಆಗಿದೆ. ಮಾಣಿ ಗ್ರಾಮದ ಶಂಭುಗ ಶೀನ ಮೂಲ್ಯ  ಅವರ ವಿದ್ಯುತ್ ಮೀಟರ್ ಗೆ ಸಿಡಿಲು ಬಡಿದು ಹಾನಿ ಆಗಿದೆ ಎಂದು ಕಂದಾಯ ಇಲಾಖೆ ಮಾಹಿತಿ ತಿಳಿಸಿದೆ.

ವಿಟ್ಲದಲ್ಲಿ ವಾಹನಗಳಿಗೆ ಹಾನಿ
ಬುಧವಾರ ಸಂಜೆ ಸುರಿದ ಭಾರೀ ಮಳೆಗಾಳಿಗೆ ವಿಟ್ಲದ ವಿ.ಎಚ್ ಕಾಂಪ್ಲೆಕ್ಸ್ ನ  ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಟ್ಟಡದಿಂದ ಕಲ್ಲುಗಳು ಬಿದ್ದು ಹಲವು ವಾಹನಗಳು ಹಾನಿಗೊಂಡ ಘಟನೆ ನಡೆದಿದೆ.

ವಿಟ್ಲದಲ್ಲಿ ಸಂಜೆ ವೇಳೆ ಭಾರೀ ಬಿರುಗಾಳಿ ಸಹಿತ ಮಳೆ ಸುರಿದಿತ್ತು. ವಿ.ಎಚ್ ಕಾಂಪ್ಲೆಕ್ಸ್ ನಲ್ಲಿ ಅಂಗಡಿ ಮಳಿಗೆಗಳ ಮುಂಭಾಗದ ಪಾರ್ಕಿಂಗ್ ನಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲಾಗಿತ್ತು. ಪಾರ್ಕಿಂಗ್ ನ ಮೇಲ್ಭಾಗಕ್ಕೆ ಬೀಸಿಲು ಬಾರದಂತೆ ಹಳದಿ ಬಟ್ಟೆಯ ಚಪ್ಪರಕ್ಕೆ ಅಳವಡಿಸಲಾಗಿದ್ದ ಹೋಲೊ ಬ್ಲಾಕ್ ಕಲ್ಲುಗಳ ರಾಶಿ  ಗಾಳಿಗೆ ಕೆಳಗಡೆ ಕುಸಿದಿದೆ.

ಇದರಿಂದ ಸುಮಾರು ಐದು ದ್ವಿಚಕ್ರ  ವಾಹನಗಳು ಹಾನಿಗೊಂಡಿದೆ. ಸ್ಥಳದಲ್ಲಿ ಜನರು ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು