News Karnataka Kannada
Thursday, May 02 2024
ಮಂಗಳೂರು

ಬಂಟ್ವಾಳ: ಹೋಟೆಲ್ ಗೆ ನುಗ್ಗಿದ ಲಾರಿ, ಚಾಲಕ ಗಂಭೀರ ಗಾಯ

Woman killed in accident, son Ashwin and husband critically injured
Photo Credit :

ಬಂಟ್ವಾಳ: ಟೋಯಿಂಗ್ ಲಾರಿಯೊಂದು ಬಸ್ ತಂಗುದಾಣ, ಅಂಗಡಿಗಳಿಗೆ ಡಿಕ್ಕಿ ಹೊಡೆದು ಬಳಿಕ ಹೋಟೆಲ್ ಗೆ ನುಗ್ಗಿದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಸಂಭವಿಸಿದೆ.

ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದು ಕೊಡಾಜೆ ಜಂಕ್ಷನ್ ನಲ್ಲಿ ನಂದಿನಿ ಹಾಲಿನ ಅಂಗಡಿ, ಬೇಕರಿ, ಬಸ್ ತಂಗುದಾಣ, ಮೊಬೈಲ್ ಅಂಗಡಿ ಮಹಡಿಗೆ, ಡಿಕ್ಕಿ ಹೊಡೆದು ಹೋಟೆಲ್ ಗೆ ನುಗ್ಗಿದೆ.

ಘಟನೆಯಿಂದ ಹಿರಿಯಡ್ಕ ನಿವಾಸಿ ಚಾಲಕ ಗೋಪಾಲ(47) ಎಂಬವರಿಗೆ ಗಾಯವಾಗಿದ್ದು, ತಕ್ಷಣವೇ ಆತನನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.

ಹಗಲು ವೇಳೆ ಇಲ್ಲಿ ಹೆಚ್ಚಿನ ಜನ ಸಂದಣಿ ಕಾಣುತ್ತಿದ್ದು, ರಾತ್ರಿ 1 ಗಂಟೆ ಅಂದಾಜಿಗೆ ಈ ಘಟನೆ ಸಂಭವಿಸಿದ್ದರಿಂದ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದೆ. ಘಟನೆಯಿಂದ ಅಂಗಡಿಗಳಿಗೆ ಭಾರೀ ಹಾನಿ ಸಂಭವಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು