Categories: ಮಂಗಳೂರು

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರ ಮೇಲೆ ಪೋಕ್ಸೋ ಪ್ರಕರಣ ದಾಖಲು

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ, ಆಕೆ ಗರ್ಭಧರಿಸಲು ಕಾರಣಿಕರ್ತರಾಗಿದ್ದಾರೆ ಎಂಬ ಆರೋಪದನ್ವಯ ಯುವತಿ ನೀಡಿದ ದೂರಿನಡಿ, ಇಬ್ಬರ ವಿರುದ್ಧ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಸೆ. ೨೯ ರಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ನಗರ ಸಮೀಪದ ನಿವಾಸಿ, ೧೦ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೋರ್ವಳನ್ನು ಜೆಸಿಬಿ ಚಾಲಕ ರವೀಂದ್ರ ಹಾಗೂ ಹುಡುಗಿಯ ಸಂಬಂಧಿ ಕೊಕ್ರಾಡಿಯ ಯೋಗೀಶ್ ಎಂಬವರು ಪ್ರತ್ಯೇಕ ಸಮಯದಲ್ಲಿ ಲೈಂಗಿಕ ದೌರ್ಜನ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ರವೀಂದ್ರ ಎಂಬಾತ ಜೆಸಿಬಿ ಚಾಲಕನಾಗಿದ್ದು ಈತ ಸಂತ್ರಸ್ತೆಯನ್ನು ಪರಿಚಯಿಸಿಕೊಂಡು ಈಕೆಯ ಮೇಲೆ ದೌರ್ಜನ್ಯ ಎಸಗಿದ್ದ. ಬಳಿಕ ಬೆದರಿಕೆ ಒಡ್ಡಿ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದಾಗ ಬಳಿಕ ಹುಡುಗಿಯ ಸಂಬಂಧಿ ಕೊಕ್ರಾಡಿಯ ಯೋಗೀಶ್ ಎಂಬಾತ ಈಕೆಯ ಮೇಲೆ ದೌರ್ಜನ ಎಸಗಿ ಈತ ಕೂಡಾ ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದಿರಿಕೆ ಒಡ್ಡಿ ತನ್ನ ಸಂಪರ್ಕದಿಂದ ದೂರವಾಗಿರುತ್ತಾರೆ ಎಂದು ದೌರ್ಜನ್ಯಕ್ಕೋಳಗಾದ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಸೆ. ೨೭ ರಂದು ಕೊರೋನ ಲಸಿಕೆ ಸಂದರ್ಭದಲ್ಲಿ ಆಕೆಯ ದೇಹಸ್ಥಿತಿಯನ್ನು ಗಮನಿಸಿದ ವೈದ್ಯರು, ಆಸ್ಪತ್ರೆಯಲ್ಲಿ ಪರೀಕ್ಷೆಗೊಳಪಡಿಸಿದ ಸಂದರ್ಭ ಆಕೆ ಗರ್ಭಿಣಿಯಾಗಿರುವುದು ಕಂಡು ಬಂದಿದ್ದು, ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದರು. ಆಸ್ಪತ್ರೆಗೆ ತೆರಳುವ ಮುನ್ನ ತನ್ನ ಮೇಲೆ ಬಲಾತ್ಕಾರವಾಗಿ ಲೈಂಗಿಕ ದೌರ್ಜನ್ಯ ಎಸಗಿ, ತನ್ನನ್ನು ಗರ್ಭವತಿಯನ್ನಾಗಿಸಿದ ಆರೋಪಿಗಳಾದ ರವೀಂದ್ರ ಹಾಗೂ ಯೋಗೀಶ ಎಂಬವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಂಡು ತನಗೆ ನ್ಯಾಯ ಒದಗಿಸಿಕೊಡಬೇಕಾಗಿ ಸಂತ್ರಸ್ತ ಬಾಲಕಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಆಕೆ ನೀಡಿದ ದೂರಿನನ್ವಯ ಬೆಳ್ತಂಗಡಿ ಪೊಲೀಸರು ವಿಚಾರಣೆ ನಡೆಸಿ, ಕಲಂ: ೫, ೬ ಫೋಕ್ಸೋ ಕಾಯ್ದೆ ೨೦೧೨ ಮತ್ತು ಕಲಂ:೩೭೬ ಜೊತೆಗೆ ೩೪ ಐಪಿಸಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Raksha Deshpande

Recent Posts

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

17 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

18 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

22 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

32 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

38 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

53 mins ago