ಬಂಟ್ವಾಳ : ಕನ್ಯಾನದ ಕಣಿಯೂರಿನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಕಿಯ ನಿವಾಸಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಪ್ರಕರಣದ ತನಿಖೆಯನ್ನು ಪೋಲಿಸ್ ಇಲಾಖೆ ಸರಿಯಾಗಿ ನಡೆಸುತ್ತಿದ್ದು ತಪ್ಪಿತಸ್ಥನಿಗೆ ಕಾನೂನಿನಡಿಯಲ್ಲೇ ಶಿಕ್ಷೆಯಾಗಲಿದೆ ಎಂಬ ಭರವಸೆ ನೀಡಿದರು.
ಕನ್ಯಾನದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿರುವ ಮೃತ ಬಾಲಕಿಯ ಪೋಷಕರಿಗೆ ಬಂಟ್ವಾಳ ಬಿಜೆಪಿ ಕ್ಷೇಮನಿಧಿಯಿಂದ ನೂತನ ಮನೆ ನಿರ್ಮಿಸುವುದಾಗಿ ಶಾಸಕರು ಇದೇ ವೇಳೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಮಂಡಲದ ಪದಾಧಿಕಾರಿಗಳು,ಸಂಘ ಪರಿವಾರದ ಪ್ರಮುಖರು ಉಪಸ್ಥಿತರಿದ್ದರು.