News Karnataka Kannada
Wednesday, May 01 2024
ಮಂಗಳೂರು

ಬಿಜೆಪಿ ಬೂತ್ ಅಧ್ಯಕ್ಷರ ಮನೆಯಲ್ಲಿ ನಾಮಫಲಕ ಅಳವಡಿಕೆ ಕಾರ್ಯಕ್ರಮ

Bjp
Photo Credit :
ಬಂಟ್ವಾಳ:  ಬಿಜೆಪಿ ಬೂತ್ ಅಧ್ಯಕ್ಷರ ಮನೆಯಲ್ಲಿ ನಾಮಫಲಕ ಅಳವಡಿಕೆ ಕಾರ್ಯಕ್ರಮ ಇಂದು ಬೆಳಿಗ್ಗೆ ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು ಬೂತ್ ಸಮಿತಿ ಅಧ್ಯಕ್ಷ ಯೋಗೀಶ್ ದರಿಬಾಗಿಲು ಅವರ ಮನೆಯಲ್ಲಿ ನೆರವೇರಿತು.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರಾದಂತಹ ಶ್ರೀ ನಾರಾಯಣ ಸ್ವಾಮಿ ಅವರು ಮಾತನಾಡಿ, ಬಂಟ್ವಾಳದ ಶಾಸಕ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂದು ಬೂತ್ ಸಮಿತಿ ಅಧ್ಯಕ್ಷರ ಮನೆಯಲ್ಲಿ ನಾಮಫಲಕ ಅಳವಡಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ ಎಂದು ಸಂತಸ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಬೂತ್ ಬೂತ್ ಗಳಲ್ಲಿ ಬಿಜೆಪಿ ಬಲವರ್ಧನೆಯಾಗಬೇಕು. ಇದಕ್ಕೆ ಶಕ್ತಿತುಂಬುವ ದೃಷ್ಟಿಯಿಂದ ಈ ಕನಸಿನ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಪುತ್ತೂರು  ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದರೆ, ಬಂಟ್ವಾಳ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ ಬಾಳಿಕೆ, ಮಂಡಲ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಜಗದೀಶ್ ಅಧಿಕಾರಿ, ರಮಾನಾಥ ರಾಯಿ, ಸೀತಾರಾಮ್ ಪೂಜಾರಿ ಅಮ್ಟಾಡಿ, ಸುದರ್ಶನ್ ಬಜ, ಪ್ರಕಾಶ್ ಅಂಚನ್, ರೊನಾಲ್ಡ್ ಡಿಸೋಜ, ಪುರುಷೋತ್ತಮ ಶೆಟ್ಟಿ ವಾಮದಪದವು, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಯಶೋಧರ ಕರ್ಬೆಟ್ಟು, ಹಿರಿಯ ಕಾರ್ಯಕರ್ತರಾದ ಭೋಜ ಪೂಜಾರಿ ದರಿಬಾಗಿಲು, ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ಅರುಣ್ ರೋಶನ್ ಡಿಸೋಜ, ಪಂಚಾಯತ್ ಅಧ್ಯಕ್ಷೆ ಯಶೋಧ ಜಾರಂದಗುಡ್ಡೆ, ಸದಸ್ಯರಾದ ಪುರುಷೋತ್ತಮ ಕೊಟ್ಟಾರಿ ಮಾಡಂಗೆ, ಮನೋಜ್ ವಳವೂರು, ವಾರಿಜ ಚಂದ್ರಿಗೆ, ರೇಶ್ಮಾ ಬೆಂಜನಪದವು, ಪಂಚಾಯತ್ ಮಾಜಿ ಸದಸ್ಯೆ ರೇವತಿ ಮಾಡಂಗೆ, ಬಿಜೆಪಿ ಮಂಡಲ ಕಾರ್ಯಕಾರಿಣಿ ಸದಸ್ಯ ದೇವಿಪ್ರಸಾದ್ ಎಂ, ಮಂಡಲ ಕಾನೂನು ಪ್ರಕೋಷ್ಟ ಸದಸ್ಯ ಪ್ರಶಾಂತ್ ನೆತ್ತರಕೆರೆ, ಹಿಂದುಳಿದ ವರ್ಗ ಮೋರ್ಚಾ ಸದಸ್ಯ ಲಕ್ಷ್ಮಣ ಕಂಜತ್ತೂರು, ಜಾರಂದಗುಡ್ಡೆ ಬೂತ್ ಅಧ್ಯಕ್ಷ ಶಿವರಾಜ್ ಜಾರಂದಗುಡ್ಡೆ, ಪಚ್ಚಿನಡ್ಕ ಬೂತ್ ಅಧ್ಯಕ್ಷ ಗ್ಲೆನ್ಸನ್ ಡಿಸೋಜಾ ಮತ್ತು ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು