Categories: ಮಂಗಳೂರು

ಬಿಜೆಪಿ ಸರಕಾರದ ವೈಫಲ್ಯಗಳನ್ನು ಮರೆಮಾಚಲು ಮತೀಯ ವಿಚಾರಗಳ ವೈಭವಿಕರಣ: ಬಿ.ಕೆ ಇಮ್ತಿಯಾಜ್

ದೇಶದ ಯುವಜನತೆ ಸಂವಿಧಾನದತ್ತವಾಗಿ ದೊರೆತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ. ಶಿಕ್ಷಣವು ಮಾರಾಟದ ಸರಕಾಗಿದೆ ,ಶಿಕ್ಷಣ ಪಡೆದ ಯುವಜನರಿಗೆ ಹೊಸ ಉದ್ಯೋಗಗಳನ್ನು ಸೃಷ್ಟಿಸದೆ ದಿನದಿಂದ ದಿನಕ್ಕೆ ನಿರುದ್ಯೋಗದ ಸಂಖ್ಯೆ ಏರುತ್ತಾ ಇದೆ. ಆದರೆ ಇಂದಿನ ಯುವಜನತೆಗೆ ಮಾತ್ರ ನೈಜ ಸಮಸ್ಯೆಯ ಬಗೆಗೆ ಅರಿವಿಲ್ಲದಿರುವುದು ಖೇದಕರ. ಉದ್ಯೋಗದ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಪ್ರಸ್ತುತ ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರಕಾರಗಳ ವೈಫಲ್ಯಗಳನ್ನು ಮರೆಮಾಚಲು ಮತೀಯ ವಿಚಾರಗಳ ವೈಭವೀಕರಣಕ್ಕೆ ಮುಂದಾಗಿದೆ ಎಂದು ಡಿವೈಎಫ್‌ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಅವರು ಇಂದು (07-02-2022) ಡಿವೈಎಫ್‌ಐ ಕಚೇರಿಯಲ್ಲಿ ನಡೆದ ಸಂಗಾತಿ ರಮೇಶ್ ಅದ್ಯಪಾಡಿ ಅವರ 12 ನೇ ವರುಷದ ಸಂಸ್ಮರಣ ದಿನದ ನೆನಪಿನಲ್ಲಿ ಯುವಜನರ ಮುಂದಿರುವ ಸವಾಲುಗಳು ಎಂಬ ವಿಚಾರ ಕುರಿತಾಗಿ ವಿಷಯವನ್ನು ಮಂಡಿಸಿದರು.

ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳ ನಡುವೆ ಕೋಮು ಅಜೆಂಡಾಗಳನ್ನು ಹರಿಯ ಬಿಡಲಾಗುತ್ತಿದೆ. ಜಾತ್ಯತೀತವಾದಿ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರ್.ಎಸ್.ಎಸ್ ಅಜೆಂಡಾಗಳ ಜಾರಿಗೆ ಮುಂದಾಗುತಿದ್ದಾರೆ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂತೋಷ್ ಬಜಾಲ್ ಮಾತನಾಡುತ್ತಾ ಕಳೆದ ಕೋರೋನ ಅಲೆಯ ಸಂದರ್ಭದಲ್ಲಿ ದೇಶದ ಆರೋಗ್ಯ ಕ್ಷೇತ್ರದ ಅಸಮರ್ಪಕತೆಯ ದರ್ಶನವಾಗಿದೆ. ಸರಕಾರಿ ಆಸ್ಪತ್ರೆಗಳ ಮೂಲಭೂತ ಸೌಕರ್ಯಗಳ ಕೊರತೆ , ಇರುವ ಸರಕಾರಿ ಆಸ್ಪತ್ರೆಗಳಲ್ಲಿ ಔಷಧಿ, ವೆಂಟಿಲೇಟರ್, ಆಕ್ಸಿಜನ್ ಸಹಿತ ನುರಿತ ವೈದ್ಯರುಗಳ ಕೊರತೆಗಳನ್ನೇ ಖಾಸಗಿ ಆಸ್ಪತ್ರೆಗಳು ಬಂಡವಾಳವನ್ನಾಗಿಸಿ ಚಿಕಿತ್ಸೆ ಹೆಸರಲ್ಲಿ ನಿರಂತರ ನಡೆದ ಸುಲಿಗೆಗಳೆಲ್ಲಾವನ್ನೂ ದೇಶವು ಗಮನಿಸಿದೆ. ಆದರೆ ಕೋರೋನ ನಂತರದಲ್ಲಿಯೂ ಆರೋಗ್ಯ ಕ್ಷೇತ್ರ ಯಾವುದೇ ಸುಧಾರಣೆಯನ್ನು ಕಂಡಿಲ್ಲ. ಪ್ರಜಾಪ್ರಭುತ್ವ ದೇಶದ ಜನಪ್ರತಿನಿಧಿಗಳು ತಮ್ಮ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ ವಿನಹ ಜನತೆಯ ಸಮಸ್ಯೆಗಳತ್ತ ಕನಿಷ್ಠ ಗಮನವನ್ನು ಹರಿಸುತ್ತಿಲ್ಲ. ಹಾಗಾಗಿ ಉತ್ತಮ ಆರೋಗ್ಯದ ರಕ್ಷಣೆ ಬಡ-ಮಧ್ಯಮ ವರ್ಗದ ಜನತೆಗೆ ಕೈಗೆಟುಕದಷ್ಟು ದುಬಾರಿಯಾಗಿದೆ. ಜಿಲ್ಲೆಯಲ್ಲಿ ಎಂಟು ಖಾಸಗಿ ಮೆಡಿಕಲ್ ಕಾಲೇಜುಗಳು ಇದ್ದರೂ ಒಂದೇ ಒಂದು ಸರಕಾರಿ ಮೆಡಿಕಲ್ ಕಾಲೇಜ್ ಇಲ್ಲವಾಗಿದೆ. ಖಾಸಗಿ ಆಸ್ಪತ್ರೆಗಳ ಲೂಟಿ ಎಗ್ಗಿಲ್ಲದೆ ಸಾಗುತ್ತಿದೆ. ಆದರೆ ಯುವಜನರು ತಮ್ಮ ಬದುಕಿನಿಂದ ವಂಚಿತವಾದ ಆಹಾರ, ಆರೋಗ್ಯ, ಉದ್ಯೋಗದ ವಿಚಾರವಾಗಿ ಬೀದಿಗಿಳಿಯುವ ಬದಲು ಧರ್ಮ, ಜಾತಿಯ ಅಮಲಿನಲ್ಲಿ ಬೀದಿಗಿಳಿಯುವುದು ಖೇದಕರ ಎಂದರು.

ಸಭೆಯನ್ನು ಮನೋಜ್ ವಾಮಂಜೂರು ಸ್ವಾಗತಿಸಿದರು. ನವೀನ್ ಕೊಂಚಾಡಿ ವಂದಿಸಿದರು.

Gayathri SG

Recent Posts

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

20 mins ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

32 mins ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

55 mins ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

1 hour ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

1 hour ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

2 hours ago