News Karnataka Kannada
Sunday, April 28 2024
ಮಂಗಳೂರು

ಬಿ.ಸಿ.ರೋಡ್: ಪಾದಾಚಾರಿಗೆ ಅಪರಿಚಿತ ವಾಹನ ಢಿಕ್ಕಿ, ವೃದ್ಧ ಸಾವು

Accident
Photo Credit :

ಬಂಟ್ವಾಳ, ಡಿ.25 : ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಾರಿಯಾದ ಘಟನೆಯಿಂದ ಪಾದಾಚಾರಿಯೊಬ್ಬರು ಸಾವನ್ನಪ್ಪಿದ ಘಟನೆ ಶನಿವಾರ ಬಿ.ಸಿ.ರೋಡ್ ತಲಪಾಡಿಯಲ್ಲಿ ನಡೆದಿದೆ.

ತಲಪಾಡಿ ರಸ್ತೆಯ ಬದಿಯಲ್ಲಿ ರಕ್ತಸ್ರಾವವಾಗಿ ಬಿದ್ದಿದ್ದ ವ್ಯಕ್ತಿಯನ್ನು ಸ್ಥಳೀಯರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಗಂಭೀರ ಸ್ವರೂಪದ ಗಾಯವಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಂದಾಜು 61 ವರ್ಷದ ಗಂಡಸಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯವಾಗಿತ್ತು.

ಆದರೆ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಈ ವರೆಗೆ ಸಿಗದೆ ಇರುವುದರಿಂದ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸಂಬಂಧಿತ ಕುಟುಂಬವರಿಗಾಗಿ ಮಾಹಿತಿ ಕಲೆ ಹಾಕಲಾಗುತ್ತಿದೆ.

ಒಂದು ವೇಳೆ ಯಾರಾದರೂ ಇವರ ಪರಿಚಯವಿದ್ದು ಅಥವಾ ಸಂಬಂಧಿಕರು ಇದ್ದರೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಹೋಗಬಹುದು ಅಥವಾ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯ ನ್ನು ಸಂಪರ್ಕ ಮಾಡಬಹುದು ಎಂದು ಟ್ರಾಫಿಕ್ ಎಸ್. ಐ. ರಾಜೇಶ್ ಕೆ.ವಿ.ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು