Categories: ಮಂಗಳೂರು

ಬುಡೋಳಿ ಜಂಕ್ಷನ್ ನಲ್ಲಿ ಅಕ್ರಮ ಮರಳು ಗಾರಿಕೆ ವಿರುದ್ಧ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಅಕ್ರಮ ಮರಳು ಗಾರಿಕೆ ವಿರುದ್ಧ ಪ್ರತಿಭಟನೆಯು ಬುಡೋಳಿ ಜಂಕ್ಷನ್ ನಲ್ಲಿ ನಡೆಯಿತು.

ಮಾಜಿ ಸಚಿವ ಬಿ ರಮಾನಾಥ ರೈ ಮಾತನಾಡಿ, ಬಂಟ್ವಾಳ ಶಾಸಕರ ಬೆಂಬಲಿಗರು ಒಂದು ಕಡೆಗೆ ಪರ್ಮಿಟ್ ಪಡೆದು ವಿವಿಧ ಕಡೆಗಳಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದಾರೆ, ತನ್ನ ಅವಧಿಯಲ್ಲಿ ಮರಳುಗಾರಿಕೆಗೆ ಕಾನೂನು ತಂದಿದ್ದು, ಅದರ ದುರುಪಯೋಗ ನಡೆಯುತ್ತಿದೆ. ರಾಜಾರೋಷವಾಗಿ ಯಂತ್ರಗಳ ಮೂಲಕ ತೆಗೆಯಲಾಗುತ್ತಿದೆ‌. ನಮ್ಮನ್ನು ತಡೆಯವರುವ ಯಾರೂ ಎಂದು ರಾಜಾರೋಷವಾಗಿ ತೆಗೆಯಲಾಗುತ್ತಿದೆ. ಇಂತಹ ಮರಳುಗಾರಿಕೆಯಿಂದ ಮಸೀದಿ, ದೇವಸ್ಥಾನಕ್ಕೂ ತೊಂದರೆಯಾಗುತ್ತಿದೆ. ಇದು ದೇವಸ್ಥಾನದ ಅಸ್ಥಿತ್ವದ ಮೇಲೆ ಪರಿಣಾಮ ಬೀಳುತ್ತಿದೆ ಎಂದರು.

ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ಮಾತನಾಡಿ ರಾಜ್ಯದಲ್ಲಿರುವ ಸರಕಾರವೇ ಅಕ್ರಮವಾಗಿದೆ. ಇದರಿಂದ ನಡೆಯುವ ಎಲ್ಲಾ ಕಾರ್ಯವೂ ಅಕ್ರಮವಾಗಿದೆ. ಈಗಾಗಲೇ 40 ಪರ್ಸೆಂಟ್ ಸರಕಾರ ಎಂಬ ಹೆಗ್ಗಳಿಕೆ ಈ ಸರಕಾರಕ್ಕೆ ದೊರಕಿದೆ. ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ತಮ್ಮ ಬೆಂಬಲಿಗರಿಗೆ ಅಕ್ರಮ ಮರಳುಗಾರಿಕೆ ನಡೆಸಲು ಸಂಪೂರ್ಣ ಬೆಂಬಲ ನೀಡುವ ಮೂಲಕ ಕಮಿಷನ್ ಪಡೆಯುತ್ತಿದ್ದಾರೆ ಎಂದರು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾತನಾಡಿ, ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಿದ್ದು, ಶಾಸಕರಿಗೆ , ಇಲಾಖೆಗೆ ಮಾಮೂಲಿ ಹೋಗುತ್ತಿದೆ. ದುಪ್ಪಟ್ಟು ಹಣ ನೀಡಿ ಬಡವರು ಮರಳು ಖರೀಸುವಂತಾಗಿದೆ. ಜನರಿಗೆ ಪರಿಹಾರ ಒದಗಿಸುವುದು ರಾಜಧರ್ಮವಾಗಿದೆ. ಆದರೆ ಇಲ್ಲಿ ಮರಳಿನಿಂದ ಲಕ್ಷ ಲಕ್ಷಾ ನುಂಗುತ್ತಿದ್ದಾರೆ. ಮರಳು ಅಡ್ಡೆಗೆ ದಾಳಿ ನಡೆಸಿದವರಿಗೆ ವರ್ಗಾವಣೆ ಬೆದರಿಕೆ ಬರುತ್ತಿದೆ ಎಂದರು.
ಬೂಡಾ ದ ಮಾಜಿ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್ ಮಾತನಾಡಿ, ಬಿಜೆಪಿ ಪಕ್ಷ ಸರ್ಕಾರ ರಚನೆಯಿಂದ ತೊಡಗಿ ಪ್ರತಿಯೊಂದರಲ್ಲೂ ಅಕ್ರಮವನ್ನೇ ಅನುಸರಿಸುತ್ತಿದೆ ಎಂದರು.

 ಪ್ರಮುಖರಾದ ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಂಟ್ವಾಳ ಬ್ಲಾಕ್ ನ ಮಾಜಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಪಾಣೆಮಂಗಳೂರು ಬ್ಲಾಕ್ ಮಾಜಿ ಅಧ್ಯಕ್ಷ ಅಬ್ಬಾಸ್ ಆಲಿ, ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ವಿಭಾಗದ ಅದಕ್ಷೆ  ಜಯಂತಿ ಪೂಜಾರಿ,  ಬಂಟ್ವಾಳ ಪುರಸಭಾ ಸದಸ್ಯ ವಾಸು ಪೂಜಾರಿ, ಬಂಟ್ವಾಳ ತಾ.ಪಂ.ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರು ಸಂಪತ್ ಕುಮಾರ್ ಶೆಟ್ಟಿ, ಮಣಿ ನಾಲ್ಕೂರು ಗ್ರಾ.ಪಂ‌ ಸದಸ್ಯರು ಶಿವಪ್ಪ ಪೂಜಾರಿ, ಮಣಿ ನಾಲ್ಕೂರು ಗ್ರಾ.ಪಂ ಮಾಜಿ ಅಧ್ಯಕ್ಷ  ಆದಂ ಕುಂಞಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ  ಪಿ.ಎ ರಹೀಂ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮಾನಾಥ್ ಶೆಟ್ಟಿ‌ ಪೆರ್ನೆ, ಬಂಟ್ವಾಳ ಎಪಿಎಂಸಿ  ಮಾಜಿ  ಅಧ್ಯಕ್ಷ ಪದ್ಮನಾಭ ರೈ,  ಮಾಣಿ ಗ್ರಾ.ಪಂ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಉಪಾಧ್ಯಕ್ಷ ಪ್ರೀತಿ ಡಿನ್ನಾ ಪಿರೇರ, ಸದಸ್ಯರಾದ ಮೆಲ್ವಿನ್ ಕಿಶೋರ್ ಮಾರ್ಟೀಸ್

ಪೆರಾಜೆ ಗ್ರಾ.ಪಂ ಅಧ್ಯಕ್ಷೆ ರೋಹಿಣಿ, ಉಪಾಧ್ಯಕ್ಷ ಉಮ್ಮಾರ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಸದಸ್ಯರಾದ  ಕುಶಲ ಎಂ.ಪೆರಾಜೆ,  ನೀಲಯ್ಯ ಪೂಜಾರಿ, ತಿಮ್ಮಪ್ಪ ಗೌಡ, ಸುಂದರ ಬಂಗೇರ, ಲಿಂಗಪ್ಪ  ಕುಲಾಲ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಬುಡೋಳಿ, ಪ್ರಮುಖರಾದ ಅಪ್ರಾಯ ಪೈ ಬುಡೋಳಿ, ಸಾಂತಪ್ಪ ಕುಲಾಲ್ ಏಮಾಜೆ, ಸುಲೈಮಾನ್ ಸೂರಿಕುಮೇರ್, ನಾರಾಯಣ, ರಾಮಣ್ಣ ಗೌಡ ಪೆರಾಜೆ, ಅಝೀಜ್ ಜೋಗಿಬೆಟ್ಟು ಮೊದಲಾದವರು ಉಪಸ್ಥಿತರಿದ್ದರು

Sneha Gowda

Recent Posts

ಘಟ್ಟದ ಮೇಲಿನ ಶಾಸಕರನ್ನ ಅವಮಾನಿಸಿದ ಕರಾವಳಿಯ ಶಾಸಕ

ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ‌ ಶಾಸಕರ ಅಚೀವ್ ಮೆಂಟ್…

2 mins ago

ಮೋದಿ ಪ್ರಧಾನ ಮಂತ್ರಿ ಅಲ್ಲ, ರಾಜ ಎಂದ ರಾಹುಲ್

ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜರು ಎಂದು ರಾಹುಲ್‌ ಗಾಂಧಿ ಹೇಳಿದರು.

6 mins ago

ಎಂ.ಸಿ. ಸಿ. ಬ್ಯಾಂಕಿನ ನೂತನ ಆಡಳಿತ ಕಛೇರಿ ಉದ್ಘಾಟನೆ, 112ನೇ ಸ್ಥಾಪಕರ ದಿನಾಚರಣೆ

ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…

12 mins ago

ಬಿಕರ್ನಕಟ್ಟೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಸ್ಥಳೀಯರು ಆಕ್ರೋಶ

ನಗರದ ಹೊರವಲಯದ ಗುರುಪುರ ಕೈಕಂಬದಲ್ಲಿ ನಿರ್ಮಾಣ ಆಗಲಿರುವ ಮೆಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು .ಕಾಮಗಾರಿ ವಿರುದ್ಧದ ಸ್ಥಳೀಯರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾಮಗಾರಿ…

25 mins ago

ಕ್ರೂಸರ್ ವಾಹನ ಪಲ್ಟಿ: 3 ಮಹಿಳೆಯರು ಮೃತ್ಯು

ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಸಾಂಗೋಲಾ- ಜತ್ತ ಮಾರ್ಗದ ಬಳಿ…

26 mins ago

ಪ್ರಜ್ವಲ್ ನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ: ಪೋಸ್ಟರ್ ಅಂಟಿಸಿದ್ದ ಕಾರ್ಯಕರ್ತರು ವಶಕ್ಕೆ

ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ ಅಂಟಿಸಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ…

39 mins ago