ಬೆಳ್ತಂಗಡಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಆಶಯದಂತೆ ಪ್ರತೀ ಬೂತ್ ಅಧ್ಯಕ್ಷರ ಮನೆಗಳಿಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುನ್ನ ನಾರಾವಿ ಶ್ರೀ ಸೂರ್ಯನಾರಾಯಣ ದೇವರ ಆಶೀರ್ವಾದ ಪಡೆದು, ಬೆಳ್ತಂಗಡಿ ತಾಲೂಕಿನ 1ನೆ ಬೂತ್ ನಾರವಿ ಇದರ ಅಧ್ಯಕ್ಷ ದಯಾನಂದ ಕೋಟ್ಯಾನ್ ಅವರ ಮನೆಗೆ ನಾಮ ಫಲಕ ಅಳವಡಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು ಹಾಗೂ ಸ್ಥಳೀಯ ಬಿಜೆಪಿ ಪದಾಧಿಕಾರಿ ಉದಯ ಹೆಗ್ಡೆ ಮತ್ತಿತರರು ಜೊತೆಗಿದ್ದರು.