ಮಂಗಳೂರು: ಕೇವಲ ಬೆಂಗಳೂರಿಗೆ ಸೀಮಿತ ವಾಗಿರುವ ಉದ್ಯೋಗವಕಾಶಗಳನ್ನು ರಾಜ್ಯದ ಎಲ್ಲಾ ಭಾಗಗಳಿಗೆ ವಿಸ್ತರಿಸುವ ಉದ್ದೇಶ ಇದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ ತಿಳಿಸಿದರು
ಮಂಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಬುಧವಾರ ಜನಾಶೀರ್ವಾದ ಯಾತ್ರೆ ನಡೆಸಿದ ಅವರು, ಮುಂದಿನ 25 ವರ್ಷದ ಆಡಳಿತ ಗುರಿಯನ್ನು ಇರಿಸಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಚಿಂತನೆ ನಡೆಸಲಾಗುವುದು ಎಂದರು.
ನೆಟ್ವರ್ಕ್ ಸಂಬಂಧಿ ಟಾಸ್ಕ್ಫೋರ್ಸ್: ರಾಜ್ಯದಲ್ಲಿ ನೆಟ್ವರ್ಕ್ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ಸಂಬಂಧ ಒಂದು ಟಾಸ್ಕ್ಫೋರ್ಸ್ ರಚಿಸಲಾಗುತ್ತಿದೆ. ಈ ಸಮಿತಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇಂಟರ್ನೆಟ್ ಕ್ವಾಲಿಟಿ, ಬ್ಯಾಂಡ್ ವಿಡ್ತ್ ಮೊದಲಾದ ವಿಚಾರಗಳ ಬಗ್ಗೆ ಮೌಲ್ಯಮಾಪನ ಮಾಡಲಿದೆ. ಬೆಂಗಳೂರು ನಗರ ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ಇಂಟರ್ನೆಟ್ ಅಷ್ಟಾಗಿ ತಲುಪಿಲ್ಲ. ಈ ವಿಚಾರದಲ್ಲಿಯೂ ಟಾಸ್ಕ್ ಫೋರ್ಸ್ ಗಮನ ಹರಿಸಲಿದೆ ಎಂದು ಸಚಿವ ರಾಜೀವ್ ಚಂದ್ರಶೇಖರ್ ಮಾಹಿತಿ ನೀಡಿದರು.
|
|
ಬೆಂಗಳೂರಿಗೆ ಸಿಮಿತವಾಗಿರುವ ಉದ್ಯೋಗವಕಾಶಗಳನ್ನು ರಾಜ್ಯಾದಂತ ವಿಸ್ತರಿಸಲಾಗುವುದು : ರಾಜೀವ ಚಂದ್ರಶೇಖರ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.