Categories: ಮಂಗಳೂರು

ಬೆಂಗಳೂರು- ಮಂಗಳೂರು ಟೋಲ್‌ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ಬೆಂಗಳೂರು, ; ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯ ಪ್ರಯಾಣವು ಸೆಪ್ಟೆಂಬರ್ 1ರಿಂದ ದುಬಾರಿಯಾಗಲಿದ್ದು, ಬಳಕೆದಾರರ ಮೇಲೆ ಹೊರೆ ಹೆಚ್ಚಲಿದೆ.ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‍ಎಚ್‍ಎಐ) ಹೆದ್ದಾರಿ ಶುಲ್ಕವನ್ನು ಪರಿಷ್ಕರಿಸಿದ್ದು, ಇದಕ್ಕೆ ಅಧಿಕೃತ ಮುದ್ರೆಯೂ ಬಿದ್ದಿದೆ. ಇದರಿಂದ ನಿತ್ಯ ಪ್ರಯಾಣಿಸುವವರು ಹೆಚ್ಚು ಶುಲ್ಕ ಪಾವತಿಸಬೇಕಾಗುತ್ತದೆ.
ಬೆಂಗಳೂರು-ತುಮಕೂರು-ಹಾಸನ-ಶಿವಮೊಗ್ಗದ ನಡುವೆ ಪ್ರಯಾಣಿಸುವವರು ನೆಲಮಂಗಲ ಹಾಗೂ ಕರ್ಬೈಲು (ಬೆಳ್ಳೂರು ಕ್ರಾಸ್) ಟೋಲ್ ಸಂಗ್ರಹ ಕೇಂದ್ರಗಳ ಮೂಲಕ ಹಾದು ಹೋಗಬೇಕಾಗುತ್ತದೆ. ಟೋಲ್ ಮೂಲಕ ಸಾಗಿ ಮತ್ತೆ ಹಿಂದಕ್ಕೆ ಬರುವ ಕಾರುಗಳು ನೆಲಮಂಗಲ ಟೋಲ್‍ನಲ್ಲಿ ಇನ್ನು ಮುಂದೆ 65 ರೂ. ಬದಲು 70 ರೂ. ಪಾವತಿಸಬೇಕಾಗುತ್ತದೆ. ಒಂದೇ ಬಾರಿ ಟೋಲ್ ಸಂಗ್ರಹ ಕೇಂದ್ರದ ಮೂಲಕ ಹಾದು ಹೋಗುವ ಕಾರುಗಳು ಮೊದಲಿನಂತೆ 45 ರೂ. ಶುಲ್ಕವನ್ನಷ್ಟೇ ಪಾವತಿಸಬೇಕು. ಮಾಸಿಕ ಪಾಸ್ ದರವನ್ನು 40 ರೂ. ಹೆಚ್ಚಳ (1,390) ಮಾಡಲಾಗಿದೆ.
ಬಸ್ ಮತ್ತು ಟ್ರಕ್‍ಗಳು ಒಮ್ಮೆ ಹಾದು ಹೋಗುವ ಶುಲ್ಕವನ್ನು ಕ್ರಮವಾಗಿ 5 ಮತ್ತು 10ರಷ್ಟು ಏರಿಸಲಾಗಿದೆ. ಮಾಸಿಕ ಪಾಸ್ ದರವನ್ನು 140 ರೂ.ರಷ್ಟು ಹೆಚ್ಚಿಸಲಾಗಿದೆ. ಇನ್ನು ಮುಂದೆ ಇವರು ತಿಂಗಳಿಗೆ 4,865 ಮೊತ್ತ ಪಾವತಿಸಬೇಕು. ಲಘು ವಾಣಿಜ್ಯ ವಾಹನಗಳ ಮಾಸಿಕ ಪಾಸ್ ದರವನ್ನು ಶೇ.75ರಷ್ಟು ಏರಿಸಲಾಗಿದೆ. ತಾವು ಬೆಳೆದ ತರಕಾರಿಗಳನ್ನು ನಿತ್ಯ ಮಾರುಕಟ್ಟೆಗೆ ಸಾಗಿಸುವ ರೈತರ ಮೇಲೆ ಇದರಿಂದ ಹೊರೆ ಹೆಚ್ಚಬಹುದು ಎಂದು ಹೇಳಲಾಗಿದೆ.
ಕೋವಿಡ್‍ನಿಂದಾಗಿ ಜನರ ಬದುಕು ತತ್ತರಿಸಿದೆ. ಹೀಗಾಗಿ ಸರ್ಕಾರವು ಕೂಡಲೇ ಹೆದ್ದಾರಿ ಶುಲ್ಕ ಪರಿಷ್ಕರಣೆ ನಿರ್ಧಾರ ಕೈಬಿಡಬೇಕು. ಅಥವಾ ಇನ್ನು ಎರಡು ವರ್ಷ ಇದನ್ನು ಮುಂದೂಡಬೇಕು ಎಂಬ ಆಗ್ರಹ ಕೇಳಿಬಂದಿದೆ.

 

Indresh KC

Recent Posts

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

34 seconds ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

22 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

39 mins ago

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

1 hour ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

1 hour ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

2 hours ago