ಬೆಳ್ತಂಗಡಿ: ಅವಿವಾಹಿತ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ನೇಲ್ಯಡ್ಕದ ದೇವಸ್ಯ ಎಂಬಲ್ಲಿ ನಡೆದಿದೆ.ಕೊಲೆಯಾದ ವ್ಯಕ್ಯಿ ಕೃಷಿಕ ಮತ್ತು ಎಲ್ ಐ ಸಿ ಪ್ರತಿನಿಧಿಯಾಗಿರುವ ಶಾಂತಪ್ಪ ಗೌಡ ದೇವಸ್ಯ (40) ಗುರುತಿಸಲಾಗಿದೆ.
ಸ್ಥಳೀಯ ನಿವಾಸಿ ಜಯಚಂದ್ರ ಎಂಬವನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ . ಜಾಗದ ವಿಚಾರವಾಗಿ ಕೊಲೆ ಮಾಡಿದ್ದಾರೆ ಎಂದು ಸ್ಥಳೀಯರ ಅನುಮಾನ. ಸ್ಥಳಕ್ಕೆ ಧರ್ಮಸ್ಥಳ ಠಾಣೆಯ ಪಿಎಸ್ಐ ಕೃಷ್ಣಕಾಂತ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ