ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಕಕ್ಕೆಜಾಲು ಎಂಬಲ್ಲಿ ವ್ಯಕ್ತಿಯೊಬ್ಬರ ಮನೆಯಲ್ಲಿ ಕಳ್ಳತನ ನಡೆಸಿ ಪರಾರಿಯಾದ ಘಟನೆ ನಡೆದಿದೆ. ಈಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿ ಇಂತಿಯಾಜ್ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯಿಂದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಘಟನೆಯ ವಿವರ : ಸುಲೈಮಾನ್ ಸಾಹೇಬ್ ಎಂಬವರು ಜನವರಿ 22 ರಂದು ತನ್ನ ಮನೆಗೆ ಬೀಗ ಭದ್ರತೆಯನ್ನು ಮಾಡಿಕೊಂಡು ಸಂಸಾರ ಸಮೇತ ಭದ್ರಾವತಿಗೆ ಹೋಗಿದ್ದರು.
ಮರುದಿನ ವಾಪಾಸು ಬಂದು ನೋಡಿದಾಗ ಮನೆಯ ಸಿಟೌಟ್ ನಲ್ಲಿ ಇರಿಸಿದ್ದ ಆಕ್ಟೀವಾ 6 ಜಿ ಕೆಎ ದ್ವಿ ಚಕ್ರ ವಾಹನ ಇಲ್ಲದೇ ಇದ್ದು, ಮನೆಯ ಒಳಗೆ ಬಂದು ನೋಡಿದಾಗ ಮನೆಯ ಮಾಡಿನ ಹಂಚನ್ನು ಯಾರೋ ಕಳ್ಳರು ತೆಗೆದು ಒಳ ಪ್ರವೇಶಿಸಿ ಗೋಡ್ರೇಜ್ ಚೆಲ್ಲಾಪಿಲ್ಲಿಯಾಗಿದ್ದು, ಗೋಡ್ರೇಜ್ ನಲ್ಲಿದ್ದ ನಗದು ರೂ 60,000, 1 ಜೊತೆ ಕಿವಿಯೋಲೆ, 2 ಉಂಗುರಗಳು , ನೋಕಿಯಾ ಕಂಪೆನಿಯ ಸಣ್ಣ ಮೊಬೈಲ್ ಹಾಗೂ ಒಳಗಿದ್ದ ಆಕ್ಟೀವಾ 6ಜಿ ದ್ವಿ ಚಕ್ರ ವಾಹನದ ಕೀಯನ್ನು ಕದ್ದು ಮನೆಯ ಸಿಟೌಟ್ ನಲ್ಲಿದ್ದ ಆಕ್ಟೀವಾ 6ಜಿ ಸಮೇತ ಕಳವು ಮಾಡಿಕೊಂಡಿದ್ದರು.
ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿ ಮುಂಡಾಜೆ ಗ್ರಾಮದ ಚೆನ್ನಿಗುಡ್ಡೆ ನಿವಾಸಿ ಇಂತಿ @ ಇಂತಿಯಾಜ್ ಎಂಬಾತನನ್ನು ವಶಕ್ಕೆ ಪಡೆದು ಆರೋಪಿತನಿಂದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.