ಬೆಳ್ತಂಗಡಿ: ಮುಂಡಾಜೆಯ ಧುಂಬೆಟ್ಟು ಎಂಬಲ್ಲಿರುವ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿನದ ಮುನ್ನಾ ದಿನವಾದ ಜು.25ರಂದು ಬೆಳ್ತಂಗಡಿಯ ಮಾಜಿ ಸೈನಿಕರ ಸಂಘದ ವತಿಯಿಂದ ಶ್ರಮದಾನ ಕಾರ್ಯಕ್ರಮ ಜರಗಿತು.
ಕಾರ್ಗಿಲ್ ಯುದ್ಧದಲ್ಲಿ ಮಡಿದ ವೀರ ಯೋಧರ ನೆನಪಿಗಾಗಿ ಇಲ್ಲಿ 2 ವರ್ಷಗಳ ಹಿಂದೆ ಸಚಿನ್ ಭಿಡೆಯವರು,ತಮ್ಮ ಸ್ವಂತ 5 ಎಕರೆ ಜಾಗದಲ್ಲಿ ಸುಮಾರು 800 ವಿವಿಧ ಜಾತಿಯ ಬೆಲೆಬಾಳುವ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದಾರೆ.
ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷ ಎಂ. ವಿ.ಭಟ್ ಹಾಗೂ ಅಧ್ಯಕ್ಷ ಕೃಷ್ಣ ಭಟ್ ಅಶ್ವತ್ಥ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಗಿಡಗಳ ಸುತ್ತ ಬೆಳೆದಿರುವ ಗಿಡಗಂಟಿಗಳನ್ನು ತೆರವುಗೊಳಿಸಿ ಸಾವಯವ ಗೊಬ್ಬರವನ್ನು ನೀಡಿ, ಖಾಲಿ ಇದ್ದ ಜಾಗದಲ್ಲಿ ಗಿಡಗಳನ್ನು ನಾಟಿ ಮಾಡಲಾಯಿತು.
ಸಂಘದ ಸದಸ್ಯರಾದ ಸುನಿಲ್ ಶೆಣೈ, ಕಾಂಚೋಡು ಗೋಪಾಲಕೃಷ್ಣ ಭಟ್, ಮೋಹನ ಶೆಟ್ಟಿ, ಉಮೇಶ್ ಬಂಗೇರ, ಶ್ರೀಕಾಂತ ಗೋರೆ, ಉದನೇಶ್ವರ ಭಟ್ ತಂಗಚ್ಚನ್, ಸ್ಥಳೀಯರಾದ ಸುನಿಲ್ ಭಿಡೆ, ಅಶೋಕ ಮೆಹೆಂದಳೆ, ಬಾಲಚಂದ್ರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
ಶಶಿಧರ್ ಖಾಡಿಲ್ಕರ್ ಸ್ವಾಗತಿಸಿ ಲತಾ ಜಿ.ಭಿಡೆ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ರಾಷ್ಟ್ರಗೀತೆ ಹಾಡಲಾಯಿತು.
ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…
ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…
ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಶಾಸಕರದ್ದು ಎನ್ನಲಾದ…
ಹಿಂದಿ ಕಿರುತೆರೆ ನಟಿ ರೂಪಾಲಿ ಗಂಗೂಲಿ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಪ್ರಧಾನಿಯವರ ಕೆಲಸದಿಂದ ಪ್ರಭಾವಿತಳಾಗಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು…
ರಾಷ್ಟ್ರ ರಾಜಧಾನಿ ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದ ಸುಮಾರು 100 ಶಾಲೆಗಳಿಗೆ ಇ-ಮೇಲ್ ಮೂಲಕ ಒಡ್ಡಲಾದ ಬಾಂಬ್ ಬೆದರಿಕೆ…