News Karnataka Kannada
Monday, April 29 2024
ಮಂಗಳೂರು

ಬೆಳ್ತಂಗಡಿ: ಕಾಳಜಿ ಕೇಂದ್ರಗಳಿಗೆ ತೆರಳುವಂತೆ ಸೂಚನೆ

Untitled 3
Photo Credit :

ಬೆಳ್ತಂಗಡಿ: ೨೦೨೨-೨೩ನೇ ಸಾಲಿನ ಮುಂಗಾರು ಮಳೆ ಪ್ರಾರಂಭವಾಗಲಿದ್ದು ಪ್ರಸ್ತುತ ಹವಾಮಾನ ವೈಪರಿತ್ಯದಿಂದ ಮಳೆಯಾಗುತ್ತಿದ್ದು ಮುಂದಿನ ದಿನಗಳಲ್ಲಿ ಹವಾಮಾನ ವೈಪರಿತ್ಯದಿಂದ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಈ ಹಿಂದಿನ ನೆರೆ ಪೀಡಿತ ಗ್ರಾಮಗಳ ಈ ಕೆಳಗಿನ ಪ್ರದೇಶಗಳಲ್ಲಿರುವ ಜನರು ಕೂಡಲೇ ಕಾಳಜಿ ಕೇಂದ್ರಗಳಿಗೆ ತೆರಳುವಂತೆ ತಾಲೂಕು ಆಡಳಿತ ವತಿಯಿಂದ ಸೂಚನೆ ನೀಡಲಾಗಿದ್ದು ಈ ಬಗ್ಗೆ ಸಂಬಂಧಪಟ್ಟ ಕಾಳಜಿ ಕೇಂದ್ರಗಳ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.

ಮಿತ್ತಬಾಗಿಲು ಗ್ರಾಮದ ಗಣೇಶ್ ನಗರ ಪ್ರದೇಶದ ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಮಿತ್ತಬಾಗಿಲು ಕಾಳಜಿ ಕೇಂದ್ರಕ್ಕೆ ನೋಡೆಲ್ ಅಧಿಕಾರಿಯಾಗಿ ಬೆಳ್ತಂಗಡಿ ಪಂಚಾಯತ್ ರಾಜ್ ಉಪವಿಭಾಗದ ಎ.ಇ, ಹರ್ಷಿತ್, ಕಡಿರುದ್ಯಾವರ ಗ್ರಾಮದ ಬೊಳ್ಳೂರುಬೈಲು, ಉದ್ದಾರ, ಕೊಯಮಜಲು, ನೂಜಿ ಪ್ರದೇಶದ ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಕೊಡಿಯಾಲಬೈಲು ಕಾಳಜಿ ಕೇಂದ್ರಕ್ಕೆ ನೋಡೆಲ್ ಅಧಿಕಾರಿಯಾಗಿ ಕಡಿರುದ್ಯಾವರ ಕಾನರ್ಪ ಮುಖ್ಯೋಪಾದ್ಯಾಯಿನಿ ಫಿಲೋಮಿನಾ, ಮಲವಂತಿಗೆ ಗ್ರಾಮದ ಮಕ್ಕಿ, ಪರ್ಲ, ಇಳಿಯೂರುಕಂಡ, ಎಳನೀರು ಪ್ರದೇಶದ ದ.ಕ.ಜಿ.ಪಂ.ಕಿ.ಪ್ರಾ ಶಾಲೆ ಕಜಕ್ಕೆ, ಮಲವಂತಿಗೆ ಕಾಳಜಿ ಕೇಂದ್ರಕ್ಕೆ ನೋಡೆಲ್ ಅಧಿಕಾರಿಯಾಗಿ ಮಲವಂತಿಗೆ, ಕಜಕ್ಕೆ ಮುಖ್ಯೋಪಾಧ್ಯಾಯ ಕುಮಾರಸ್ವಾಮಿ, ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ಪ್ರದೇಶದ ದ.ಕ.ಜಿ.ಪಂ.ಹಿ.ಪ್ರಾ ಶಾಲೆ ದೇವನಾರಿ, ಇಂದಬೆಟ್ಟು ಕಾಳಜಿ ಕೇಂದ್ರಕ್ಕೆ ನೋಡೆಲ್ ಅಧಿಕಾರಿಯಾಗಿ ಇಂದಬೆಟ್ಟು ದೇವನಾರಿ ಶಾಲೆಯ ಮುಖ್ಯೋಪಾಧ್ಯಾಯ ಕಿಶೋರ್, ಚಾರ್ಮಾಡಿ ಗ್ರಾ.ಪಂನ ಹೊಸ್ಮಠ, ಕೊಳಂಬೆ, ಪರ್ಲಾಣಿ, ಕಾಟಾಜೆ, ಅಂತರ ಪ್ರದೇಶದ ಹಾಗೂ ಚಿಬಿದ್ರೆ ಗ್ರಾಮದ ಅನಾರು, ನಳಿಲು ಪ್ರದೇಶದ ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಚಾರ್ಮಾಡಿ ಕಾಳಜಿ ಕೇಂದ್ರಕ್ಕೆ ನೋಡೆಲ್ ಅಧಿಕಾರಿಯಾಗಿ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ಎ.ಇ.ಇ ಶಿವಪ್ರಸಾದ್‌ರವರನ್ನು ನೇಮಿಸಲಾಗಿದೆ ಎಂದು ಬೆಳ್ತಂಗಡಿ ತಹಶಿಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು