News Karnataka Kannada
Thursday, May 02 2024
ಮಂಗಳೂರು

ಬೆಳ್ತಂಗಡಿ ಕುಲಾಲ ಭವನ ನಿರ್ಮಾಣ: ಪೂರ್ವಭಾವಿ ಸಭೆ

Untitled 1
Photo Credit :

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ನೂತನ ಸಮುದಾಯ ಭವನ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆಯು ಮೇ ೨೨ರಂದು ಗುರುವಾಯನಕೆರೆ ಶಾರದಾ ಮಂಟಪದಲ್ಲಿ ಜರಗಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲೂಕು ಸಂಘದ ಅಧ್ಯಕ್ಷ ಹರೀಶ್ ಕಾರಿಂಜ ಅವರು ಮಾತನಾಡಿ, ನಮ್ಮ ಸಮುದಾಯ ಭವನಕ್ಕೆ ಶಾಸಕ ಹರೀಶ್ ಪೂಂಜ ಅವರು ರೂ. 1.50 ಕೋಟಿ ಅನುದಾನ ಒದಗಿಸಿದ್ದಾರೆ. ಈಗಿರುವ ಕುಲಾಲ ಭವನದ ಸ್ಥಳದಲ್ಲಿ ನೂತನ ಸಮುದಾಯ ಭವನ ನಿರ್ಮಿಸಲು ಜಾಗದ ಕೊರತೆ ಇದೆ. ಇದಕ್ಕಾಗಿ ಹೊಸದಾಗಿ 37 ಸೆಂಟ್ಸ್ ಜಾಗವನ್ನು ಖರೀದಿಸಿ ಸಮುದಾಯ ಭವನ ನಿರ್ಮಿಸಲಾಗುವುದು. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.

ಸಮುದಾಯ ಭವನ ನಿರ್ಮಾಣ ಸಮಿತಿ ಅಧ್ಯಕ್ಷ ಸೋಮಯ್ಯ ಮೂಲ್ಯ ಹನೈನಡೆ ಅವರು ಮಾತನಾಡಿ, ರೂ. 1.00 ಕೋಟಿಯಷ್ಟು ಮೊತ್ತ ನಿವೇಶನ ಖರೀದಿಗೆ ಬೇಕಾಗಿದ್ದು, ಎಲ್ಲರು ಸಹಕರಿಸುವಂತೆ ವಿನಂತಿಸಿದರು. ಸಂಘಟನಾ ಕಾರ್ಯದರ್ಶಿ ಸೋಮನಾಥ ಕೆ.ವಿ., ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಹಾಗೂ ಸಭಾಭವನ ನಿರ್ಮಾಣ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಮಿತಿಯ ಕಾರ್ಯದರ್ಶಿ ಜಗನ್ನಾಥ ಕುಲಾಲ್ ಪ್ರಸ್ತಾವಿಸಿ, ಕಟ್ಟಡ ಸಮಿತಿ ಕೋಶಾಧಿಕಾರಿ ಯತೀಶ್ ಸಿರಿಮಜಲು ಸ್ವಾಗತಿಸಿ, ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು