Categories: ಮಂಗಳೂರು

ಬೆಳ್ತಂಗಡಿ: ಗಾಯಗೊಂಡಿದ್ದ ಜಿಂಕೆ ಸಾವು

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಮುಂಡಾಜೆ- ಕಾಪು ರಕ್ಷಿತಾರಣ್ಯದ ರಸ್ತೆಯಲ್ಲಿ, ಭಾನುವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಜಿಂಕೆ ಸೋಮವಾರ ಬೆಳಿಗ್ಗೆ ಮೃತಪಟ್ಟಿದೆ.

ವಾಹನ ಡಿಕ್ಕಿ ಹೊಡೆದು ರಸ್ತೆ ಬದಿ ಒದ್ದಾಡುತ್ತಿದ್ದ ಜಿಂಕೆಗೆ ಅರಣ್ಯ ಇಲಾಖೆ ಸಿಬ್ಬಂದಿ, ಮುಂಡಾಜೆ ಗ್ರಾಮ ಪಂಚಾಯಿತಿ ಸದಸ್ಯ ಜಗದೀಶ್ ನಾಯ್ಕ್, ಶೇಖರ ಅಂಬಡ್ತ್ಯಾರ್ ಹಾಗೂ ಸ್ಥಳೀಯರ ಸಹಕಾರದಲ್ಲಿ ಪಶುವೈದ್ಯರಿಂದ ಚಿಕಿತ್ಸೆ ಕೊಡಿಸಿದ್ದರು.ಆದರೆ ಚಿಕಿತ್ಸೆಗೆ ಸ್ಪಂದಿಸದ ಜಿಂಕೆ ಮೃತಪಟ್ಟಿತು.

ಅಪಘಾತದಿಂದ ತಲೆ ಹಾಗೂ ಸೊಂಟದ ಭಾಗಕ್ಕೆ ತೀವ್ರವಾಗಿ ಗಾಯಗೊಂಡು ಮೃತಪಟ್ಟ ಸುಮಾರು ಒಂದೂವರೆ ವರ್ಷ ಪ್ರಾಯದ ಗಂಡು ಜಿಂಕೆಯ ಮರಣೋತ್ತರ ಪರೀಕ್ಷೆಯನ್ನು ಉಜಿರೆ ಪಶು ಚಿಕಿತ್ಸಾಲಯದ ಪಶುವೈದ್ಯಾಧಿಕಾರಿ ಡಾ.ಕಾರ್ತಿಕ್ ನಡೆಸಿದರು. ಮುಂಡಾಜೆ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ಹಿರಿಯ ಪಶುವೈದ್ಯಕೀಯ ಪರೀಕ್ಷಕ ನಾಗಶಯನ ರಾವ್,ಉಪ ವಲಯ ಅರಣ್ಯಾಧಿಕಾರಿ ಯತಿಂದ್ರ ಹಾಗೂ ಅರಣ್ಯ ರಕ್ಷಕ ಶರತ್ ಶೆಟ್ಟಿ ಸಹಕರಿಸಿದರು.

Sneha Gowda

Recent Posts

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

13 mins ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

39 mins ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

54 mins ago

ಟ್ರಾಫಿಕ್‌ ನಡುವೆ ಮೀಟಿಂಗ್‌ ಅಟೆಂಡ್‌ ಮಾಡಿದ ಮಹಿಳೆ

ವಾಹನದಟ್ಟಣೆಗೆ ಹೆಸರಾಗಿರುವ ರಾಜ್ಯರಾಜಧಾನಿಯಲ್ಲಿ ಮಹಿಳೆಯೊಬ್ಬರು ಟ್ರಾಫಿಕ್‌ ನಡುವೆಯೇ ಮೀಟಿಂಗ್‌ನಲ್ಲಿ ಪಾಲ್ಗೊಂಡು ಸುದ್ದಿಯಾಗಿದ್ದಾರೆ.

1 hour ago

ಕ್ಷುಲ್ಲಕ ಕಾರಣಕ್ಕೆ ಜಗಳ: ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಟೀ ಶಾಪ್ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದ ಕಾಟನ್ ಪೇಟೆ ಪೋಲಿಸ್…

1 hour ago

ಫೇಸ್ ಬುಕ್​ನ ಜಾಹೀರಾತಿನ ಜಾಲಕ್ಕೆ ಬಿದ್ದು 2 ಲಕ್ಷ ಕಳ್ಕೊಂಡ ಮಹಿಳೆ

ಫೇಸ್ ಬುಕ್​ನ ಒಂದು ಜಾಹಿರಾತಿಗೆ ಮರುಳಾದ ಮಹಿಳೆ ಬರೊಬ್ಬರಿ 2 ಲಕ್ಷದ 21 ಸಾವಿರ ರೂ ಹಣ ಕಳೆದುಕೊಂಡಿದ್ದಾರೆ. ಫೇಸ್…

1 hour ago