ಬೆಳ್ತಂಗಡಿ: ಗಾಯಗೊಂಡಿದ್ದ ಕಾಳಿಂಗಕ್ಕೆ ಚಿಕಿತ್ಸೆ ಮಾಡಿ ಕಾಡಿಗೆ ಬಿಟ್ಟ ವಿದ್ಯಮಾನ ಚಿಬಿದ್ರೆಯಲ್ಲಿ ನಡೆದಿದೆ. ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಗಾಂಧಿ ನಗರದ ಬಳಿ ರಬ್ಬರ್ ತೋಟವೊಂದರಲ್ಲಿ ಗಾಯಗೊಂಡ ಸ್ಥಿತಿಯಲ್ಲಿದ್ದ ಕಾಳಿಂಗ ಸರ್ಪ ಮಂಗಳವಾರ ಕಂಡು ಬಂದಿತ್ತು.
ಸುಮಾರು 12ಅಡಿ ಉದ್ದದ ಕಾಳಿಂಗ ಸರ್ಪ ಅಸ್ವಸ್ಥ ಸ್ಥಿತಿಯಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುವ ವೇಳೆ ಪತ್ತೆಯಾಗಿದ್ದು,ಕೂಡಲೇ ಅರಣ್ಯ ಇಲಾಖೆ ಹಾಗೂ ತೋಟತ್ತಾಡಿಯ ಸ್ನೇಕ್ ಅನಿಲ್ ಅವರಿಗೆ ಮಾಹಿತಿ ನೀಡಲಾಯಿತು. ಸ್ಥಳೀಯರ ಸಹಕಾರದಲ್ಲಿ ಕಾಳಿಂಗ ಸರ್ಪವನ್ನು ಹಿಡಿಯಲಾಯಿತು.
ಹೆಬ್ಬಾವಿನ ಜತೆ ಕಾದಾಟ ನಡೆಸಿ ಅದನ್ನು ನುಂಗಿದ್ದ ಕಾಳಿಂಗ ಸರ್ಪ ಅಸ್ವಸ್ಥ ಸ್ಥಿತಿಯನ್ನು ತಲುಪಲು ಕಾರಣವಾಗಿತ್ತು, ಬಳಿಕ ಅದನ್ನು ವಾಂತಿ ಮಾಡಿಸಲಾಗಿದೆ ಎಂದು ಸ್ನೇಕ್ ಅನಿಲ್ ತಿಳಿಸಿದ್ದಾರೆ.
ಸೆಣಸಾಟದ ವೇಳೆ ಮೈಮೇಲೆಯು ಗಾಯಗಳಾಗಿದ್ದ ಕಾರಣ ಕಾಳಿಂಗ ಸರ್ಪವನ್ನು ಚಾರ್ಮಾಡಿ ಪಶು ಆಸ್ಪತ್ರೆಗೆ ಒಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.ಈ ವೇಳೆ ಚೇತರಿಸಿಕೊಂಡ ಕಾಳಿಂಗ ಸರ್ಪದ ಆರೋಗ್ಯ ಪರಿಶೀಲಿಸಿ ಕಾಡಿಗೆ ಬಿಡಲಾಗಿದೆ
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…