News Karnataka Kannada
Sunday, May 05 2024
ಮಂಗಳೂರು

ಬೆಳ್ತಂಗಡಿ ತಾಲೂಕಿನ ಅರ್ಹ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

Belthangady
Photo Credit :

ಬೆಳ್ತಂಗಡಿ: ರಾಜ್ಯ ಸರಕಾರ ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತಿದ್ದು, ಕೋವಿಡ್ ಸಂದರ್ಭ ಸೇರಿದಂತೆ ಬೆಳ್ತಂಗಡಿ ತಾಲೂಕಿಗೆ ವಿವಿಧ ಯೋಜನೆಗಳಿಗೆ ಕಾರ್ಮಿಕ ಇಲಾಖೆಯಿಂದ 12 ಕೋ. ರೂ. ಅನುದಾನ ನೀಡಲಾಗಿದೆ ಎಂದು ಶಾಸಕ ಹರೀಶ್ ಪೂಂಜ‌ ತಿಳಿಸಿದರು.

ಅವರು ಸೋಮವಾರ ಗುರುವಾಯನಕೆರೆ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಮಿಕ ಇಲಾಖೆ ಮತ್ತು ತಾಲೂಕು ಆಡಳಿತ ಬೆಳ್ತಂಗಡಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಅರ್ಹ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಹಿರಿತನ ಆಧಾರದಲ್ಲಿ ಮೇಸ್ತ್ರೀ, ಪೈಂಟರ್ ಹಾಗೂ ಸೆಂಟ್ರಿಂಗ್ ಕಾರ್ಮಿಕರಿಗೆ ಕಿಟ್ ವಿತರಣೆ ಹಾಗೂ ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸರಕಾರದಲ್ಲಿ ಕಾರ್ಮಿಕರಿಗೆ ಕೋವಿಡ್ ಸಂದರ್ಭ ಚಿಕಿತ್ಸೆ, ಪಿಂಚಣಿ, ಸ್ಕಾಲರ್ ಶಿಫ್ ಸೇರಿದಂತೆ ಮೊದಲಾದ ಯೋಜನೆಗಳಿಗೆ ಅನುದಾನ ನೀಡಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಬಿಎಂಎಸ್ ಸಂಘಟನೆ ಕಾರ್ಮಿಕರ ಕಷ್ಟಗಳಿಗೆ ಸ್ಪಂದನೆ ನೀಡುತ್ತಿದೆ. ಈ ಹಿಂದೆ ಸಾವಿರಾರು ಕಾರ್ಮಿಕರಿಗೆ ಆಹಾರ ಕಿಟ್ ನೀಡಲಾಗಿತ್ತು. ಪ್ರಸ್ತುತ 1125 ಮಂದಿ ಕಾರ್ಮಿಕರಿಗೆ ಕಾರ್ಮಿಕ‌ ಕಿಟ್ ನೀಡಲಾಗಿದೆ. ಮೇಸ್ತ್ರೀ ಗಳಿಗೆ, ಪೈಂಟರ್ ಗಳಿಗೆ ಹಾಗೂ ಸೆಂಟ್ರಿಂಗ್ ಅರ್ಹ ಕಾರ್ಮಿಕರನ್ನು ಗುರುತಿಸಿ ಕಿಟ್ ವಿತರಿಸಲಾಗುತ್ತಿದೆ ಎಂದರು.

ಭಾರತೀಯ ಮಜ್ದೂರು ಸಂಘದ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕರ ಹಿತವನ್ನು ಬಯಸುವವರೇ ಹೊರತು ಹಣ ಮಾಡುವ ಸಂಘಟನೆಯಲ್ಲ. ಬಿಎಂಎಸ್ ಸಂಘಟನೆ ಗ್ರಾಮ ಮಟ್ಟದಲ್ಲಿ ಕಾರ್ಮಿಕರಿಗಾಗಿ ಹಲವಾರು ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಶಾಸಕನ ನೆಲೆಯಲ್ಲಿ ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಪಟ್ಟಣ ಪಂಚಾಯತಿ ಅಧ್ಯಕ್ಷೆ ರಜನಿ ಕುಡ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯಾನಂದ ಗೌಡ, ನಾವೂರು ಗ್ರಾ.ಪಂ. ಅಧ್ಯಕ್ಷ ಗಣೇಶ್ ನಾವೂರು, ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಹರಿಣಾಕ್ಷಿ, ಇಂದಬೆಟ್ಟು ಗ್ರಾ.ಪಂ.‌ಅಧ್ಯಕ್ಷ ಆನಂದ ಅಡೀಲು, ಲಾಯಿಲ ಗ್ರಾ.ಪಂ. ಉಪಾಧ್ಯಕ್ಷ ಗಣೇಶ್ ಲಾಯಿಲ, ಬೆಳ್ತಂಗಡಿ ತಹಸೀಲ್ದಾರ್ ಮಹೇಶ್ ಜೆ., ತಾ.ಪಂ.‌ಇಒ ಕುಸುಮಾಧರ್ ಉಪಸ್ಥಿತರಿದ್ದರು.

ಭಾರತೀಯ ಮಜ್ದೂರು ಸಂಘದ ರಾಜ್ಯ ಉಪಾಧ್ಯಕ್ಷ ಜಯರಾಜ್ ಸಾಲಿಯಾನ್ ಪ್ರಸ್ತಾವಿಸಿ ಮಾತನಾಡಿದರು. ಕಾರ್ಮಿಕ‌ ಇಲಾಖಾಧಿಕಾರಿ ಹರೀಶ್ ಸ್ವಾಗತಿಸಿದರು. ಭಾರತೀಯ ಮಜ್ದೂರು ಸಂಘದ ತಾಲೂಕು ಅಧ್ಯಕ್ಷ ಉದಯ ಬಿ.ಕೆ. ವಂದಿಸಿದರು. ಶಿಕ್ಷಕ ಅಜಿತ್ ಕೊಕ್ರಾಡಿ ಕಾರ್ಯಕ್ರಮ ನಿರ್ವಹಿಸಿದರು.

“ಮೇಸ್ತ್ರೀ, ಪೈಂಟರ್ ಹಾಗೂ ಸೆಂಟ್ರಿಂಗ್ ಕೆಲಸ ಮಾಡುವ 1120 ಮಂದಿ ಫಲಾನುಭವಿಗಳಿಗೆ ಕಿಟ್ ವಿತರಣೆ ನಡೆಯಿತು. ಇದೇ ಸಂದರ್ಭ ಕಾರ್ಮಿಕರಿಗೆ ವೈದ್ಯಕೀಯ ಆರೋಗ್ಯ ಉಚಿತ ಶಿಬಿರ ನಡೆಸಲಾಯಿತು.”

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು