ಬೆಳ್ತಂಗಡಿ : ತಾಲೂಕಿನ ಸವಣಾಲು ಗ್ರಾಮದ ಕಿಚ್ಚಿನಡ್ಕಎಂಬಲ್ಲಿ ಅವಿವಾಹಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರನ್ನು ಪುರಂದರ (44) ಎಂದು ಗುರುತಿಸಲಾಗಿದೆ. ಇವರು ಎಲೆಕ್ಟ್ರೀಶಿಯನ್ ವೃತ್ತಿ ನಿರ್ವಹಿಸುತ್ತಿದ್ದರು. ಅಮಲು ಪದಾರ್ಥ ಸೇವನೆಯ ಚಟವನ್ನು ಹೊಂದಿದ್ದ ಇವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಶನಿವಾರ ತನ್ನ ತೋಟದ ಗೇರುಬೀಜದ ಮರದ ಕೊಂಬೆಗೆ ನೈಲಾನ್ ಹಗ್ಗವನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.