ಬೆಳ್ತಂಗಡಿ : ಇಲ್ಲಿನ ಕೆದಿಹಿತ್ಲು ನಿವಾಸಿ ಕೃಷಿಕ ಬಾಲಕೃಷ್ಣ ಅಠವಳೆ(90) ಅಲ್ಪಕಾಲದ ಅಸೌಖ್ಯದಿಂದ ಡಿ.15ರಂದು ಸ್ವಗೃಹದಲ್ಲಿ ನಿಧನರಾದರು.
ಯಕ್ಷಗಾನ ಕಲಾವಿದರಾಗಿದ್ದ ಅವರು,ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮುಂಡಾಜೆ ಸಿ.ಎ. ಬ್ಯಾಂಕ್, ಶತಾಬ್ದಿ ವಿದ್ಯಾಲಯ ಸಮಿತಿ ಇದರ ನಿರ್ದೇಶಕರಾಗಿ, ಮುಂಡಾಜೆ ಯುವಕ ಮಂಡಲದ ಸ್ಥಾಪಕ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಅವರಿಗೆ ಪತ್ನಿ ಇಬ್ಬರು ಪುತ್ರಿಯರು ಹಾಗೂ ಪುತ್ರ ಇದ್ದಾರೆ.