News Karnataka Kannada
Wednesday, May 08 2024
ಮಂಗಳೂರು

ಬೆಳ್ತಂಗಡಿ: ಯಕ್ಷೋತ್ಸವ 2021ರ ಸಮಾರೋಪ ಸಮಾರಂಭ

Ujire (1)
Photo Credit :

ಬೆಳ್ತಂಗಡಿ: ನೈತಿಕ ಹಾಗೂ ಸಾಮಾಜಿಕ ಮೌಲ್ಯಗಳನ್ನು ಹೆಚ್ಚಿಸಿ ಶಿಕ್ಷಣ ರೂಪದಲ್ಲಿಯು ಶಕ್ತಿ ತುಂಬುವ ಕಲೆ ಎಂದರೆ ಅದು ಯಕ್ಷಗಾನ. ಕರಾವಳಿಯ ಈ ಕಲೆಯು ಆಧ್ಯಾತ್ಮಿಕ, ಸಾಂಸ್ಕೃತಿಕವಾಗಿಯೂ ಜನರನ್ನು ಆಕರ್ಷಿಸಿದೆ. ಈ ಕಲೆಯ ಬೆಳವಣಿಗೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಹೆಚ್ಚಿನ ಪ್ರೋತ್ಸಾಹ ಹಾಗೂ ಅವಕಾಶಗಳನ್ನು ನೀಡುತ್ತಿದೆ ಎಂದು ಎಂಎಲ್ ಸಿ ಪ್ರತಾಪಸಿಂಹ ನಾಯಕ್ ಹೇಳಿದರು.

ಅವರು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಶ್ರಯದಲ್ಲಿ ಯಕ್ಷಜನ ಸಭಾ ಉಜಿರೆ ಇದರ ವತಿಯಿಂದ ಬೆಳ್ತಂಗಡಿಗೆ ರೋಟರಿ ಕ್ಲಬ್ ಸಹಯೋಗದಲ್ಲಿ ಜರಗಿದ ಯಕ್ಷೋತ್ಸವ 2021ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಭಾಗವತ ದಿನೇಶ್ ಅಮ್ಮಣ್ಣಾಯ ಗುರುವಿನ ಆಶೀರ್ವಾದವಿದ್ದರೆ ಕಲಾವಿದ ಬೆಳೆಗಲು ಸಾಧ್ಯ, ಅಭಿಮಾನಿಗಳ ಪ್ರೀತಿ ವಿಶ್ವಾಸ ಕಲಾವಿದರ ಉನ್ನತಿಗೆ ಮೂಲ ಎಂದರು.

ಯಕ್ಷಜನ ಸಭಾದ ಗೌರವಾಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ, ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಸದಸ್ಯೆ ಉಷಾಕಿರಣ್ ಕಾರಂತ್, ಶ್ರೀಶ ಮುಚ್ಚಿನ್ನಾಯ, ದಯಾನಂದ ಎಳಚಿತ್ತಾಯ, ಗಂಗಾಧರ ಕೆವುಡೇಲು, ಕೃಷ್ಣ ಕುಮಾರ ಐತಾಳ, ರಘುರಾಮ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಶ್ರೀಧರ ಭಟ್ ಕಾರ್ಯಕ್ರಮ ನಿರ್ವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು