News Karnataka Kannada
Sunday, May 05 2024
ಮಂಗಳೂರು

ಬೆಳ್ತಂಗಡಿ: ಶಾಲಾ ಬಾಲಕನಿಗೆ ಕಣಜದ ಹುಳುಗಳು ದಾಳಿ , ಗಂಭೀರ ಗಾಯ

A 79-year-old man hiding in a well after being attacked by a bee
Photo Credit :

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು ರಕ್ಷಿತಾರಣ್ಯದಲ್ಲಿ ಶಾಲಾ ಬಾಲಕನಿಗೆ ಕಣಜದ ಹುಳುಗಳು ದಾಳಿ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ ಸೋಮವಾರ ಸಂಜೆ ಜರಗಿದೆ.

ಸ್ಥಳೀಯ ಶಾಲೆಯೊಂದರ ಎಂಟನೇ ತರಗತಿ ವಿದ್ಯಾರ್ಥಿ ಕೊಡಂಗೆ ನಿವಾಸಿ ಸಂಜೆ ಶಾಲೆ ಮುಗಿಸಿ ವಾಪಸಾಗುತ್ತಿದ್ದಾಗ ಏಕಾಏಕಿ ಕಣಜದ ಹುಳುಗಳು ದಾಳಿ ನಡೆಸಿವೆ.

ಈ ವೇಳೆ ಬಾಲಕ ಓಡ ತೊಡಗಿದ್ದು,ಇದನ್ನು ಗಮನಿಸಿದ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಯತಿಂದ್ರ ಹಾಗೂ ಅರಣ್ಯ ರಕ್ಷಕ ಶರತ್ ಶೆಟ್ಟಿ ಬಾಲಕನಿಗೆ ಇನ್ನಷ್ಟು ಕಣಜದ ಹುಳುಗಳು ಕಚ್ಚದಂತೆ ಮುನ್ನೆಚ್ಚರಿಕೆ ವಹಿಸಿದರು.ಅರಣ್ಯ ಇಲಾಖೆ ಸಿಬ್ಬಂದಿಯ ಮೇಲು ಕಣಜದ ಹುಳುಗಳು ದಾಳಿ ನಡೆಸಿವೆ.

ಬಾಲಕನನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿರುವ ಕುರಿತು ವೈದ್ಯರು ತಿಳಿಸಿದ್ದಾರೆ.
ಗಿಡುಗ ಕಣಜದ ಹುಳುಗಳ ಗೂಡಿಗೆ ದಾಳಿ ನಡೆಸಿದ್ದು ಘಟನೆಗೆ ಕಾರಣವೆಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು