News Karnataka Kannada
Sunday, April 28 2024
ಮಂಗಳೂರು

ಬೆಳ್ತಂಗಡಿ: ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರರಿಗೆ ಮನವಿ

Belthangady
Photo Credit :

ಬೆಳ್ತಂಗಡಿ : ಹೊಸ ವರ್ಷಾಚರಣೆಯ ನೆಪದಲ್ಲಿ ಡಿಸೆಂಬರ್ 31 ರ ರಾತ್ರಿ ನಡೆಯುವ ಹೊಸ ವರ್ಷಾಚರಣೆ ಮತ್ತು ಪಾರ್ಟಿಗಳನ್ನು ನಿಷೇಧಿಸಲು ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ ಮತ್ತು ಪೊಲೀಸ್ ವೃತ್ತ ನೀರೀಕ್ಷಕರ ಕಚೇರಿಗೆ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿಯನ್ನು ನೀಡಿದ್ದಾರೆ.

ಮನವಿಯಲ್ಲಿ ದೇಶದಾದ್ಯಂತ ಹೆಚ್ಚುತ್ತಿರುವ ಪಾಶ್ಚಾತ್ಯ ಕೆಟ್ಟ ರೂಢಿಗಳ ಅಂಧಾನುಕರಣೆಯಿಂದಾಗಿ ಹೊಸ ವರ್ಷದ ಹೆಸರಿನಲ್ಲಿ ಡಿಸೆಂಬರ್ 31 ರ ಮಧ್ಯರಾತ್ರಿ ಧೂಮಪಾನ, ಮದ್ಯಪಾನ, ಅಮಲು ಪದಾರ್ಥಗಳ ಸೇವನೆ, ಪಾರ್ಟಿಗಳ ಆಯೋಜನೆ ಮಾಡುವುದು ಹೆಚ್ಚಾಗಿರುತ್ತದೆ ಮತ್ತು ಈ ರಾತ್ರಿ ಮದ್ಯಪಾನ ಮಾಡಿ ಅತಿವೇಗದಿಂದ ವಾಹನಗಳನ್ನು ಓಡಿಸುವುದು ಹೆಚ್ಚಾಗಿದ್ದು, ಇವರಲ್ಲಿ ಸಣ್ಣವಯಸ್ಸಿನ ಯುವಕರು, ಯುವತಿಯರು ಮತ್ತು ಮಹಿಳೆಯರು ಸಹ ಇರುತ್ತಾರೆ.

ಇದಲ್ಲದೇ ಇಂತಹ ಸಮಯದಲ್ಲಿ ಅನೇಕ ಮಹಿಳೆಯರ ಲೈಂಗಿಕ ಕಿರುಕುಳ, ಅತ್ಯಾಚಾರ ಮುಂತಾದ ಘಟನೆಗಳು ನಡೆಯುತ್ತಿದೆ. ಈಗ ಕೊರೋನಾ ಮಹಾಮಾರಿಯು 3ನೇ ಅಲೆ ಬರುವ ಸಾಧ್ಯತೆ ಇದೆ ಹೀಗಿರುವಾಗ ಡಿ 31 ರಂದು ಆಚರಿಸಲಾಗುವ ಪಾರ್ಟಿಯಿಂದ ಕೊರೋನಾದ ಸೊಂಕು ಹೆಚ್ಚು ಪ್ರಮಾಣದಲ್ಲಿ ಹರಡುವ ಸಾಧ್ಯತೆ ಇದೆ. ಈ ಸಮಯದಲ್ಲಿ ಸಾರ್ವಜನಿಕರ ಆರೋಗ್ಯವನ್ನು ಅಪಾಯಕ್ಕೀಡು ಮಾಡುವುದು ಯೋಗ್ಯವಲ್ಲ. ಆದ್ದರಿಂದ ಡಿ 31 ರಾತ್ರಿ ಹೊಸ ವರ್ಷಾಚರಣೆಯನ್ನು ಪೂರ್ಣವಾಗಿ ನಿಷೇಧಿಸಬೇಕು. ಇದಲ್ಲದೇ ನಗರದಲ್ಲಿರುವ ಕೋಟೆಗಳು, ಪ್ರವಾಸಿತಾಣಗಳು, ಐತಿಹಾಸಿಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ಮದ್ಯ ಸೇವನೆಯನ್ನು ಮಾಡುವುದು ಪಾರ್ಟಿಗಳನ್ನು ಮಾಡುವುದರ ಮೇಲೆ ನಿಷೇಧ ಹೇರುವಂತೆ ಆದೇಶವನ್ನು ನೀಡಬೇಕು ಎಂದು ಆಗ್ರಹಿಸಲಾಯಿತು.

ಈ ಸಂಧರ್ಭದಲ್ಲಿ ಧರ್ಮ ಪ್ರೇಮಿಗಳಾದ ಆನಂದ ನೆರಿಯ,ಬಜರಂಗದಳ ಗೋರಕ್ಷ ಪ್ರಮುಖ್ ಕಮಲಾಕ್ಷ ಕಡಿರುದ್ಯಾವರ ಅಖಿಲೇಶ್, ರಂಜಿತ್ ಕಾಯರ್ತಡ್ಕ, ಅಕ್ಷಯ್ ಕಲ್ಲಾಜೆ, ಹರೀಶ್ ಇಂದಬೆಟ್ಟು , ವೆಂಕಟೇಶ ಕಾಯರ್ತಡ್ಕಮತ್ತು ಹಿಂದೂ ಜನಜಾಗೃತಿ ಸಮಿತಿಯ ದಾಮೋದರ, ಯೋಗೀಶ್, ಹರೀಶ್, ಸುಂದರ ನಿಡ್ಲೆ ಮತ್ತು ಹರೀಶ್ ಜೆ.ಕೆ. ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು