Categories: ಮಂಗಳೂರು

ಬೆಳ್ತಂಗಡಿ: ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ : ಹೊಸ ವರ್ಷಾಚರಣೆಯ ನೆಪದಲ್ಲಿ ಡಿಸೆಂಬರ್ 31 ರ ರಾತ್ರಿ ನಡೆಯುವ ಹೊಸ ವರ್ಷಾಚರಣೆ ಮತ್ತು ಪಾರ್ಟಿಗಳನ್ನು ನಿಷೇಧಿಸಲು ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ ಮತ್ತು ಪೊಲೀಸ್ ವೃತ್ತ ನೀರೀಕ್ಷಕರ ಕಚೇರಿಗೆ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿಯನ್ನು ನೀಡಿದ್ದಾರೆ.

ಮನವಿಯಲ್ಲಿ ದೇಶದಾದ್ಯಂತ ಹೆಚ್ಚುತ್ತಿರುವ ಪಾಶ್ಚಾತ್ಯ ಕೆಟ್ಟ ರೂಢಿಗಳ ಅಂಧಾನುಕರಣೆಯಿಂದಾಗಿ ಹೊಸ ವರ್ಷದ ಹೆಸರಿನಲ್ಲಿ ಡಿಸೆಂಬರ್ 31 ರ ಮಧ್ಯರಾತ್ರಿ ಧೂಮಪಾನ, ಮದ್ಯಪಾನ, ಅಮಲು ಪದಾರ್ಥಗಳ ಸೇವನೆ, ಪಾರ್ಟಿಗಳ ಆಯೋಜನೆ ಮಾಡುವುದು ಹೆಚ್ಚಾಗಿರುತ್ತದೆ ಮತ್ತು ಈ ರಾತ್ರಿ ಮದ್ಯಪಾನ ಮಾಡಿ ಅತಿವೇಗದಿಂದ ವಾಹನಗಳನ್ನು ಓಡಿಸುವುದು ಹೆಚ್ಚಾಗಿದ್ದು, ಇವರಲ್ಲಿ ಸಣ್ಣವಯಸ್ಸಿನ ಯುವಕರು, ಯುವತಿಯರು ಮತ್ತು ಮಹಿಳೆಯರು ಸಹ ಇರುತ್ತಾರೆ.

ಇದಲ್ಲದೇ ಇಂತಹ ಸಮಯದಲ್ಲಿ ಅನೇಕ ಮಹಿಳೆಯರ ಲೈಂಗಿಕ ಕಿರುಕುಳ, ಅತ್ಯಾಚಾರ ಮುಂತಾದ ಘಟನೆಗಳು ನಡೆಯುತ್ತಿದೆ. ಈಗ ಕೊರೋನಾ ಮಹಾಮಾರಿಯು 3ನೇ ಅಲೆ ಬರುವ ಸಾಧ್ಯತೆ ಇದೆ ಹೀಗಿರುವಾಗ ಡಿ 31 ರಂದು ಆಚರಿಸಲಾಗುವ ಪಾರ್ಟಿಯಿಂದ ಕೊರೋನಾದ ಸೊಂಕು ಹೆಚ್ಚು ಪ್ರಮಾಣದಲ್ಲಿ ಹರಡುವ ಸಾಧ್ಯತೆ ಇದೆ. ಈ ಸಮಯದಲ್ಲಿ ಸಾರ್ವಜನಿಕರ ಆರೋಗ್ಯವನ್ನು ಅಪಾಯಕ್ಕೀಡು ಮಾಡುವುದು ಯೋಗ್ಯವಲ್ಲ. ಆದ್ದರಿಂದ ಡಿ 31 ರಾತ್ರಿ ಹೊಸ ವರ್ಷಾಚರಣೆಯನ್ನು ಪೂರ್ಣವಾಗಿ ನಿಷೇಧಿಸಬೇಕು. ಇದಲ್ಲದೇ ನಗರದಲ್ಲಿರುವ ಕೋಟೆಗಳು, ಪ್ರವಾಸಿತಾಣಗಳು, ಐತಿಹಾಸಿಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ಮದ್ಯ ಸೇವನೆಯನ್ನು ಮಾಡುವುದು ಪಾರ್ಟಿಗಳನ್ನು ಮಾಡುವುದರ ಮೇಲೆ ನಿಷೇಧ ಹೇರುವಂತೆ ಆದೇಶವನ್ನು ನೀಡಬೇಕು ಎಂದು ಆಗ್ರಹಿಸಲಾಯಿತು.

ಈ ಸಂಧರ್ಭದಲ್ಲಿ ಧರ್ಮ ಪ್ರೇಮಿಗಳಾದ ಆನಂದ ನೆರಿಯ,ಬಜರಂಗದಳ ಗೋರಕ್ಷ ಪ್ರಮುಖ್ ಕಮಲಾಕ್ಷ ಕಡಿರುದ್ಯಾವರ ಅಖಿಲೇಶ್, ರಂಜಿತ್ ಕಾಯರ್ತಡ್ಕ, ಅಕ್ಷಯ್ ಕಲ್ಲಾಜೆ, ಹರೀಶ್ ಇಂದಬೆಟ್ಟು , ವೆಂಕಟೇಶ ಕಾಯರ್ತಡ್ಕಮತ್ತು ಹಿಂದೂ ಜನಜಾಗೃತಿ ಸಮಿತಿಯ ದಾಮೋದರ, ಯೋಗೀಶ್, ಹರೀಶ್, ಸುಂದರ ನಿಡ್ಲೆ ಮತ್ತು ಹರೀಶ್ ಜೆ.ಕೆ. ಉಪಸ್ಥಿತರಿದ್ದರು.

Sneha Gowda

Recent Posts

ಕಾರು ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

3 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

27 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

27 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

40 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

43 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

1 hour ago