Categories: ಮಂಗಳೂರು

ಬೆಳ್ತಂಗಡಿ : ಹೆದ್ದಾರಿ ಬದಿ ಟೆಂಟ್ ಹಾಕಿ ವಾಸ್ತವ್ಯ ಹೂಡಿರುವವರ ಸ್ಥಳಾಂತರ

ಬೆಳ್ತಂಗಡಿ : ಹೆದ್ದಾರಿ ಬದಿ ಟೆಂಟ್ ಹಾಕಿ ವಾಸ್ತವ್ಯ ಹೂಡಿರುವುದನ್ನು ಸ್ಥಳೀಯರು ಆಕ್ಷೇಪಿಸಿದ ಕಾರಣದಿಂದ ಪಂಚಾಯಿತಿಗಳ ವತಿಯಿಂದ ಅವರನ್ನು ಸ್ಥಳಾಂತರಿಸಲು ಸೂಚಿಸಲಾಯಿತು.

ಬೆಳ್ತಂಗಡಿ ತಾಲ್ಲೂಕಿನಲ್ಲಿ ನಡೆಯುತ್ತಿರುವ ಕಾಮಗಾರಿಗಾಗಿ ಆಗಮಿಸಿದ್ದ ಹೊರಜಿಲ್ಲೆಯ ಕಾರ್ಮಿಕರು ಮಂಗಳೂರು –  ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ-ಕಲ್ಮಂಜ ಗ್ರಾಮಗಳ ಗಡಿಭಾಗವಾದ ನಿಡಿಗಲ್ ಎಂಬಲ್ಲಿ ಸ್ಥಳೀಯಾಡಳಿತದ ಯಾವುದೇ ಅನುಮತಿ ಪಡೆಯದೆ ಕಳೆದ ಎರಡು ದಿನಗಳಿಂದ 6 ಟೆಂಟುಗಳಲ್ಲಿ ಪುಟ್ಟ ಮಕ್ಕಳ ಸಹಿತ ಸುಮಾರು 20 ಮಂದಿ ವಾಸ್ತವ್ಯ ಹೂಡಿದ್ದರು.

ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಈ ಸ್ಥಳದ ಪರಿಸರದಲ್ಲಿ ಇತರ ಮನೆಗಳು,ಸಮೀಪದ ಹೆದ್ದಾರಿಯಲ್ಲಿ ವಿಪರೀತ ವಾಹನ ಸಂಚಾರ,ಹಾಗೂ ಕಲ್ಮಂಜ ಭಾಗದಲ್ಲಿ ಹರಿಯುವ ನೇತ್ರಾವತಿ ನದಿಯು ಇದೆ. ಸಾಂಕ್ರಾಮಿಕ ರೋಗ, ಸ್ವಚ್ಛತೆಯ ದೃಷ್ಟಿಯಲ್ಲಿ ಅಪರಿಚಿತರು ವಾಸ್ತವ್ಯ ಹೂಡಿರುವ ಬಗ್ಗೆ ಮುಂಡಾಜೆ,ಕಲ್ಮಂಜ ಪಂಚಾಯತಿಗಳಿಗೆ ಎರಡು ದಿನಗಳಿಂದ ಅನೇಕ ಮಂದಿ ಮೌಖಿಕವಾಗಿ ದೂರುಗಳನ್ನು ಸಲ್ಲಿಸಿ ಆಕ್ಷೇಪಿಸಿದ್ದರು.

ಪರಿಶೀಲನೆ
ದೂರುಗಳು ಬಂದ ಹಿನ್ನೆಲೆಯಲ್ಲಿ ಮುಂಡಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಂಜಿನಿ ರವಿ, ಉಪಾಧ್ಯಕ್ಷೆ ದಿಶಾ ಪಟವರ್ಧನ್, ಸದಸ್ಯರಾದ ರಾಮಣ್ಣ ಶೆಟ್ಟಿ,ಗಣೇಶ ಬಂಗೇರ ಪಿಡಿಒ ಸುಮಾ ಎ.ಎಸ್, ಕಲ್ಮಂಜ ಗ್ರಾಮ ಪಂಚಾಯಿತಿ ಪಿಡಿಒ ಇಮ್ತಿಯಾಜ್, ಗುರುವಾರ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಈ ಸಮಯ ಟೆಂಟ್ ನಲ್ಲಿ ವಾಸ್ತವ್ಯವಿದ್ದ ಯವರು ಕಾಮಗಾರಿಗೆ ತೆರಳಿದ್ದು,ಸ್ಥಳದಲ್ಲಿದ್ದ ಮಹಿಳೆ ಗುತ್ತಿಗೆದಾರ ಕಂಪನಿಯೊಂದು ತಮಗೆ ಇಲ್ಲಿ ವಾಸ್ತವ್ಯ ಇರಲು ವ್ಯವಸ್ಥೆ ಮಾಡಿ ಕೊಟ್ಟಿರುವುದಾಗಿ ತಿಳಿಸಿದರು.

ಬಳಿಕ ಸ್ಥಳಕ್ಕೆ ಆಗಮಿಸಿದ ಗುತ್ತಿಗೆದಾರ ಕಂಪೆನಿ ಇಂಜಿನಿಯರ್ ಕಾರ್ಮಿಕರನ್ನು ಶುಕ್ರವಾರದೊಳಗೆ ಇಲ್ಲಿಂದ ತೆರವುಗೊಳಿಸಿ ಬೇರೆ ಕಡೆ ವಾಸ್ತವ್ಯ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Sneha Gowda

Recent Posts

ನಿರ್ಮಾಪಕ ನನಗೆ ಬೆದರಿಕೆ ಹಾಕುತ್ತಿದ್ದಾರೆ : ʻಹೆಡ್‌ಬುಷ್‌́ ನಟಿ ಗಂಭೀರ ಆರೋಪ

ಪಂಜಾಬಿ ಬ್ಯೂಟಿ ಪಾಯಲ್‌ ರಜಪೂತ್‌ ಅವರು ನಿರ್ಮಾಪಕರ ವಿರುದ್ಧ ಹೆಡ್‌ಬುಷ್‌ ನಟಿ ಬೆದರಿಕೆ ಹಾಕುತ್ತಿದ್ದಾರೆಂದು ಹೆಡ್‌ಬುಷ್‌ ನಟಿ ಆರೋಪಿಸುತ್ತಿದ್ದಾರೆ. RX…

1 hour ago

ಟಿಪ್ಪರ್- ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ…

2 hours ago

ಮುದ್ದಾದ ಮಗುವಿನ ತಾಯಿಯಾದ ಯಾಮಿ ಗೌತಮ್; ಕಂದನಿಗೆ ಇಟ್ಟ ಹೆಸರೇನು ಗೊತ್ತಾ?

ಸ್ಯಾಂಡಲ್​ವುಡ್​ ನಟ ಗಣೇಶ್​​ ಅಭಿನಯದ ಉಲ್ಲಾಸ ಉತ್ಸಾಹ ನಟಿ ಯಾಮಿ ಗೌತಮ್​​ ಅವರು ಮೇ 10 ರಂದು ಗಂಡು ಮಗುವಿಗೆ…

2 hours ago

ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…

3 hours ago

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

3 hours ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

3 hours ago