ಬೆಳ್ತಂಗಡಿ : ಬೆಳ್ತಂಗಡಿ ನ.ಪಂನ ಆಡಳಿತ ನಗರದ ಜನರ ಅಭಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸುತ್ತಿದ್ದು ಜೊತೆಗೆ ನಗರದ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ರೂಪಿಸುತ್ತಿದೆ. ಇದೀಗ ಮತ್ತೆ ನಗರದ ಅಭಿವೃದ್ಧಿಗೆ ನಗರೋತ್ಥಾನ ಯೋಜನೆಯಡಿಯಲ್ಲಿ ೫ಕೋಟಿ ರೂ. ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜಾ ತಿಳಿಸಿದರು.
ಅವರು ಶನಿವಾರ ನ.ಪಂ ಸಭಾಂಗಣದಲ್ಲಿ ೨೦೨೨-೨೩ನೇ ಸಾಲಿನ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ ನಗರದಲ್ಲಿ ಸುಸಜ್ಜಿತ ಪಾರ್ಕ್ ನಿರ್ಮಾಣ, ಸ್ಮಶಾನ ಅಭಿವೃದ್ಧಿ, ರಸ್ತೆಗಳ ಅಭಿವೃದ್ಧಿಗಳಾಗುತ್ತಿದ್ದು ಇನ್ನಷ್ಟು ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಕಳೆದ ಒಂದು ವರ್ಷದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ತುಳಸಿರವರ ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ವತಿಯಿಂದ ಉತ್ತಮ ಅಭಿವೃದ್ಧಿಗಳಾಗಿದ್ದು ಮುಂದಿನ ಸ್ಥಾಯಿ ಸಮಿತಿಯ ಆಡಳಿತಾವಧಿಯಲ್ಲಿಯೂ ಉತ್ತಮ ಅಭಿವೃದ್ಧಿ ಕಾರ್ಯಗಳು ನಡೆಸುವಲ್ಲಿ ಯೋಜನೆ ರೂಪಿಸಬೇಕು ಎಂದರು.
ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಲೋಕೇಶ್ ನಾಯ್ಕ ಆಯ್ಕೆಯಾದರು. ಸ್ಥಾಯಿ ಸಮಿತಿ ಆಯ್ಕೆ ಪ್ರಕ್ರಿಯೆಯನ್ನು ಮುಖ್ಯಾಧಿಕಾರಿ ಸುಧಾಕರ್ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಪ.ಪಂ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಸದಸ್ಯರಾದ ಶರತ್, ಜಗದೀಶ್ ಡಿ, ಜನಾರ್ಧನ್, ಅಂಬರೀಶ್, ಗೌರಿ, ರಾಜಶ್ರೀ ರಮಣ್, ಮುಖ್ಯಾಧಿಕಾರಿ ಸುಧಾಕರ್, ಇಂಜಿನಿಯರ್ ಮಹಾವೀರ ಅರಿಗ, ಉಪಸ್ಥಿತರಿದ್ದರು.