News Karnataka Kannada
Friday, May 03 2024
ಮಂಗಳೂರು

ಬೈಕ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ

New Project 2021 12 14t090329.535
Photo Credit :

ನೆಲ್ಯಾಡಿ :ಬೈಕ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್‌ನಲ್ಲಿದ್ದ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೭೫ರ ಗೋಳಿತ್ತೊಟ್ಟು ಸಮೀಪದ ಸಣ್ಣಂಪಾಡಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.

ಇಚ್ಲಂಪಾಡಿ ಗ್ರಾಮದ ಮಾನಡ್ಕ ನಿವಾಸಿ ಜಾರ್ಜ್ ಹಾಗೂ ಝಾನ್ಸಿ ದಂಪತಿ ಪುತ್ರ ಅಲ್ವಿನ್ (೨೩ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ.
ನೆಲ್ಯಾಡಿ ಗ್ರಾಮದ ಪಡಡ್ಕ ನಿವಾಸಿ ಸೆಬಿನ್ ಎಂಬವರು ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ. ಸೆಬಿನ್ ನೆಲ್ಯಾಡಿಯಲ್ಲಿ ಕೊರಿಯರ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದು ರಾತ್ರಿ ಅಲ್ವಿನ್ ಹಾಗೂ ಸೆಬಿನ್‌ರವರು ಕೊರಿಯರ್ ಪಾರ್ಸೆಲ್ ಹಿಡಿದುಕೊಂಡು ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಲ್ವಿನ್ ಹಾಗೂ ಸೆಬಿನ್ ಪ್ರಯಾಣಿಸುತ್ತಿದ್ದ ಬೈಕ್ ಹಾಗೂ ಮಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದ ಲಾರಿ ಮಧ್ಯೆ ಸಣ್ಣಂಪಾಡಿಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದರು. ಇಬ್ಬರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಈ ಪೈಕಿ ಗಂಭೀರ ಗಾಯಗೊಂಡಿದ್ದ ಇಚ್ಲಂಪಾಡಿ ನಿವಾಸಿ ಅಲ್ವಿನ್‌ರವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತ ಅಲ್ವಿನ್ ತಂದೆ, ತಾಯಿ, ಓರ್ವ ಸಹೋದರ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ. ಸೆಬಿನ್‌ರವರು ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು