News Karnataka Kannada
Friday, May 17 2024
ಮಂಗಳೂರು

ಭಗವಾನ್ ಶ್ರೀ ಆದಿನಾಥ ಸ್ವಾಮಿಗೆ 504 ಕಲಶಾಭಿಷೇಕ ಮಹೋತ್ಸವ

Photo Credit : News Kannada
ಬಂಟ್ವಾಳ: ಪಂಜಿಕಲ್ಲು ಬಸದಿಯಲ್ಲಿ ನಡೆಯುತ್ತಿರುವ ಪಂಚಕಲ್ಯಾಣ ಹಿನ್ನೆಲೆಯಲ್ಲಿ ಭಾನುವಾರ ಭಗವಾನ್ ಶ್ರೀ ಆದಿನಾಥ ಸ್ವಾಮಿಗೆ 504 ಕಲಶಾಭಿಷೇಕ ಮಹೋತ್ಸವ ಸಹಿತ ವಿವಿಧ ಕಾರ್ಯಕ್ರಮಗಳು ನೆರವೇರಿದವು. ಬೆಳಗ್ಗೆ ಸಾಮೂಹಿಕ ವೃತೋಪದೇಶ, ಗಣಧರವಲಯ ಆರಾಧನಾ ವಿಧಾನ, ಯಾಗಮಂಡಲಾರಾಧನೆ, ರಾಜ್ಯಭಾರ, ರಾಜವೈಭವ, ಪರಿನಿಷ್ಕ್ರಮಣ ಕಲ್ಯಾಣ, ದೀಕ್ಷಾ ವಿಧಿ ನೆರವೇರಿತು. ಸಂಜೆ ಅಗ್ರೋದಕ ಮೆರವಣಿಗೆ ಬಳಿಕ ಧಾರ್ಮಿಕ ಸಭೆ ಪರಮಪೂಜ್ಯ 108 ಅಮೋಘಕೀರ್ತಿ ಮುನಿ ಮಹಾರಾಜರು, ಅಮರಕೀರ್ತಿ ಮುನಿ ಮಹಾರಾಜರ ಸಹಿತ ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ರಾಜ್ಯಭಾರ ರಾಜವೈಭವ, ಪರಿನಿಷ್ಕ್ರಮಣ ಕಲ್ಯಾಣ, ಅಜೇಯ ಬಾಹುಬಲಿ, ಸಮವಸರಣ ವೈಭವ ಕುರಿತ ಸಾಂಸ್ಕೃತಿಕ ಕಾರ್ಯಕ್ರಮಗಳು, ನಿರೀಕ್ಷಾ ಜೈನ್ ಅವರಿಂದ ಸಂಗೀತ ಪೂಜಾಷ್ಟಕ ನೆರವೇರಿತು.
ಪಂಜಿಕಲ್ಲು ಬಸದಿಯಲ್ಲಿ ನಡೆಯುತ್ತಿರುವ ಪಂಚಕಲ್ಯಾಣ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೋಮವಾರ ಪಂಜಿಕಲ್ಲಿಗೆ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಜೀರ್ಣೋದ್ಧಾರ ಮತ್ತು ಪಂಚಕಲ್ಯಾಣ ಮಹೋತ್ಸವ ಸಮಿತಿ ಅಧ್ಯಕ್ಷ ಸುದರ್ಶನ ಜೈನ್ ತಿಳಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು