Categories: ಮಂಗಳೂರು

ಭರತನೃತ್ಯ ಶಿಕ್ಷಣವನ್ನು ನೀಡಲು ಮುಂದಾದ ತಾಲೂಕಿನ ಮೊದಲ ನೃತ್ಯ ಗುರು ಪಿ.ಕಮಲಾಕ್ಷ ಆಚಾರ್

ಬೆಳ್ತಂಗಡಿ : ಬೆಳ್ತಂಗಡಿಯಂತಹ ಗ್ರಾಮೀಣ ಪ್ರದೇಶದಲ್ಲಿ ನಲವತ್ತಾರು ವರ್ಷಗಳ ಹಿಂದೆ ನೃತ್ಯ ನಿಕೇತನ ಎಂಬ ಕಲಾ ಸಂಸ್ಥೆಯನ್ನು ಪ್ರಾರಂಭಿಸಿ ಭರತನೃತ್ಯ ಶಿಕ್ಷಣವನ್ನು ನೀಡಲು ಮುಂದಾದ ತಾಲೂಕಿನ ಮೊದಲ ನೃತ್ಯ ಗುರು ಪಿ.ಕಮಲಾಕ್ಷ ಆಚಾರ್.

ಅವರು ಅನೇಕ ನೃತ್ಯ ಕಲಾವಿದೆಯರನ್ನು ರೂಪಿಸಿ ರಾಜ್ಯ, ಹೊರರಾಜ್ಯಗಳಲ್ಲೂ ನೃತ್ಯ ಪ್ರದರ್ಶಗಳನ್ನು ನೀಡುವ ಮೂಲಕ ನೃತ್ಯ ಕಲೆಯಲ್ಲಿ ಬೆಳ್ತಂಗಡಿಗೂ ಒಂದು ಸ್ಥಾನವನ್ನು ತಂದುಕೊಟ್ಟು ಇಲ್ಲಿಯ ಸಾಂಸ್ಕೃತಿಕ ಮೌಲ್ಯವನ್ನು ಹೆಚ್ಚಿಸಿದ್ದು ಸರಕಾರದ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ೨೦೨೧-೨೨ನೇ ಸಾಲಿನ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪುರಸ್ಕೃತರಾದ ನೃತ್ಯಗುರು ಪಿ.ಕಮಲಾಕ್ಷ ಆಚಾರ್ ಅಭಿನಂದನಾ ಸಮಾರಂಭ ಮಾ.೨೭ರಂದು ಅಪರಾಹ್ನ ೨.೩೦ಕ್ಕೆ ಉಜಿರೆ ಶಾರದಾ ಮಂಟಪದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ವಿಠಲ ಶೆಟ್ಟಿ ಹೇಳಿದ್ದಾರೆ.

ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮೈಸೂರಿನ ನೃತ್ಯ ಕಲಾ ಪರಿಷತ್ತಿನ ನೃತ್ಯ ವಿದ್ಯಾನಿಧಿ ಬಿರುದು ಸಹಿತ ಅನೇಕ ಪ್ರಶಸ್ತಿ, ಗೌರವ, ಸನ್ಮಾನಗಳು ಬೇರೆ ಬೇರೆ ಸಂಘ ಸಂಸ್ಥೆಗಳಿಂದ ಲಭಿಸಿದೆ. ಇವರು ನೃತ್ಯರಂಗಕ್ಕೆ ಸಲ್ಲಿಸಿದ ಸೇವೆಗಾಗಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಅವರಿಗೆ ಈ ಸಾಲಿನ ಕರ್ನಾಟಕ ಕಲಾಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ಅವರ ಮೂಲಕ ಸಾಂಸ್ಕೃತಿಕ ರಂಗದಲ್ಲಿ ಬೆಳ್ತಂಗಡಿ ತಾಲೂಕಿಗೆ ಬಂದ ಗೌರವ ಇದಾಗಿದೆ. ವಿಶ್ರಾಂತ ಉಪನ್ಯಾಸಕ ಮಧುಕರ ಮಲ್ಯ ಅಭಿನಂದನಾ ಭಾಷಣ ಮಾಡಲಿದ್ದು ಡಾ| ಕೃಪಾ ಫಡ್ಕೆ, ಡಾ| ರಜತಾ ಪಿ.ಶೆಟ್ಟಿ ಉಜಿರೆ ಇವರು ಗುರುನಮನ ಸಲ್ಲಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಪರಾಹ್ನ ೨.೩೦ರಿಂದ ಮೈಸೂರಿನ ನೃತ್ಯಗಿರಿ ತಂಡದವರಿಂದ ಭರತಾಂಜಲಿ ನೃತ್ಯ ಪ್ರದರ್ಶನ ನಡೆಯಲಿದೆ ಎಂದರು.

ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಶಾಸಕ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಕೆ. ಪ್ರತಾಪ್‌ಸಿಂಹ ನಾಯಕ್, ಸಂಸ್ಕಾರ ಭಾರತೀಯ ಕರ್ನಾಟಕ ದಕ್ಷಿಣ ಉಪಾಧ್ಯಕ್ಷ ಚಂದ್ರೇಶೇಖರ ಶೆಟ್ಟಿ, ಮೊದಲಾದವರು ಉಪಸ್ಥಿತರಿರಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಅಭಿನಂದನಾ ಸಮಿತಿ ಉಪಾಧ್ಯಕ್ಷರುಗಳಾದ ಗಣಪತಿ ಭಟ್ ಕುಳವರ್ಮ, ಡಾ| ರಜತ ಪಿ ಶೆಟ್ಟಿ, ಉಜಿರೆ, ಹೇಮಂತ ರಾವ್, ಕಾರ್ಯದರ್ಶಿ ಪುರುಷೋತ್ತಮ ಕೆ.ಎ, ಸದಸ್ಯ ರಂಜನ್ ರಾವ್ ಉಪಸ್ಥಿತರಿದ್ದರು.

Sneha Gowda

Recent Posts

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

1 min ago

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

14 mins ago

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

30 mins ago

ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು; ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ…

35 mins ago

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ: ಸಿಎಂ

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ,  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

45 mins ago

ಪಡೀಲಿನಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯಕ್ಕೆ ಅಮಾಯಕ ವ್ಯಕ್ತಿ ಬಲಿ !

ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ…

51 mins ago