Categories: ಮಂಗಳೂರು

ಮಂಗಳೂರಿಗೆ ಆಗಮಿಸಿದ ಘನತೆವೆತ್ತ ರಾಜ್ಯಪಾಲರು

ಮಂಗಳೂರು : ಘನತೆವೆತ್ತ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರು ಇದೇ ಡಿಸೆಂಬರ್ 2 ರಿಂದ 5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರವಾಸ ಕೈಗೊಂಡಿದ್ದಾರೆ.

ಈ ಹಿನ್ನಲೆಯಲ್ಲಿ ರಾಜ್ಯಪಾಲರು ಡಿ.2ರ ಗುರವಾರ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರನ್ನು ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಸಹಾಯಕ ಆಯುಕ್ತ ಮದನ್ ಮೋಹನ್ ಸೇರಿದಂತೆ ಜಿಲ್ಲಾಡಳಿತ ಹಿರಿಯ ಅಧಿಕಾರಿಗಳು ರಾಜ್ಯಪಾಲರನ್ನು ಸ್ವಾಗತಿಸಿದರು. ನಂತರ ರಾಜ್ಯಪಾಲರು ಧರ್ಮಸ್ಥಳದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳಿದರು.

Sneha Gowda

Recent Posts

ಪಕ್ಷಿಗಳ ದಾಹ ತಣಿಸುವ ಪರಿಸರ ಪ್ರೇಮಿ ರಿಯಾಜ್‌ ಪಾಶಾ

ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ ತಾಲ್ಲೂಕಿನ ಗಡಿ ಭಾಗದ ಜನ ಜಾನುವಾರುಗಳ ಜತೆ ಪ್ರಾಣಿ ಪಕ್ಷಿಗಳು ಕುಡಿಯುವ ನೀರಿಗಾಗಿ ಪರದಾಡಬೇಕಿದೆ. ತಾಲ್ಲೂಕಿನ…

17 mins ago

ಚಾಮುಂಡಿಬೆಟ್ಟದ ಪಾದದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರಿನ ತೊಟ್ಟಿ ಅಳವಡಿಕೆ

ನಗರದ ಚಾಮುಂಡಿ ಬೆಟ್ಟದ ಪಾದದಲ್ಲಿ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಸೈನಿಕ ಅಕಾಡೆಮಿ  ವತಿಯಿಂದ ಶನಿವಾರ ಪ್ರಾಣಿ ಪಕ್ಷಿಗಳು,…

22 mins ago

ಪ್ರಜ್ವಲ್ ವಿರುದ್ಧ ನಾವು ಕೊಟ್ಟ ಮೊದಲ ದೂರು ದಾಖಲಾಗಿಲ್ಲ: ವಕೀಲ ಆಕ್ರೋಶ

ಹಾಸನ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ…

41 mins ago

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ : ಶೋಭಾ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವೆ ಕುಮಾರಿ…

56 mins ago

ಕೋವಿಶೀಲ್ಡ್ ಲಸಿಕೆಯ ಬಗ್ಗೆ ಜನರು ಭಯಪಡುವ ಅಗತ್ಯವಿಲ್ಲ: ದಿನೇಶ್ ಗುಂಡೂರಾವ್

ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮಗಳು ಉಂಟಾಗುತ್ತಿದೆ ಎಂಬ ಕುರಿತು ಜನರು ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

60 mins ago

ಪ್ರಜ್ವಲ್ ರೇವಣ್ಣ ಅಂತಹ ಸ್ವಭಾವದ ಹುಡುಗ ಅಲ್ಲ ಎಂದ ಸಂಸದ ಜಿ.ಎಸ್ ಬಸವರಾಜ್

ಪ್ರಜ್ವಲ್ ರೇವಣ್ಣ ನನ್ನ ಆತ್ಮೀಯ ಸ್ನೇಹಿತ. ಅಂತಹ ಸ್ವಭಾವದ ಹುಡುಗ ಅಲ್ಲ. ಪ್ರಜ್ವಲ್ ಅವರ ಮೇಲಿನ ಪ್ರಕರಣ ಸತ್ಯನೋ ಸುಳ್ಳೋ…

1 hour ago