ಬೆಂಗಳೂರು: ‘ಇಟಾ’ (ಬಿ.1.525) ಹೆಸರಿನ ಹೊಸ ತಳಿಯ ಕೊರೊನಾ ವೈರಾಣು ಗುರುವಾರ ಮಂಗಳೂರಿನಲ್ಲಿ ಪತ್ತೆಯಾಗಿದೆ.
ಕತಾರ್ನಿಂದ ಮಂಗಳೂರಿಗೆ ಬಂದ ವ್ಯಕ್ತಿ ಕೋವಿಡ್ ಪೀಡಿತರಾಗಿದ್ದು, ಅವರ ಮಾದರಿಯನ್ನು ಜಿನೋಮಿಕ್ ಸಿಕ್ವೆನ್ಸೀಸ್ (ಅನುಕ್ರಮಣಿಕೆ) ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅವರಲ್ಲಿ ಇಟಾ ತಳಿಯ ವೈರಾಣು ಕಾಣಿಸಿಕೊಂಡಿತ್ತು ಎನ್ನುವುದು ಈಗ ದೃಢಪಟ್ಟಿದೆ. ಇದೀಗ ಸರ್ಕಾರಕ್ಕೆ ಮತ್ತೊಂದು ಸವಾಲು ಎದುರಾಗಿದ್ದು, ಜಾಗೃತ ವಹಿಸುವುದು ಅಗತ್ಯವಾಗಿದೆ.
ಬೆಂಗಳೂರಿನಲ್ಲಿ 414, ಉಡುಪಿಯಲ್ಲಿ 134, ಹಾಸನದಲ್ಲಿ 125 ಮಂದಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 100ರ ಗಡಿಯೊಳಗೆ ವರದಿಯಾಗಿವೆ. ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 29.13 ಲಕ್ಷ ದಾಟಿದೆ. ಕೊರೊನಾ ಸೋಂಕಿತರಲ್ಲಿ 1,651 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 28.52 ಲಕ್ಷ ದಾಟಿದೆ.
ಕೋವಿಡ್ ಪೀಡಿತರಲ್ಲಿ 25 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. 12 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 5, ಕೋಲಾರ, ದಕ್ಷಿಣ ಕನ್ನಡ ಹಾಗೂ ಬೆಳಗಾವಿಯಲ್ಲಿ ತಲಾ 3, ಉಡುಪಿ, ಮೈಸೂರು ಹಾಗೂ ಮಂಡ್ಯದಲ್ಲಿ ತಲಾ ಇಬ್ಬರು ಸಾವಿಗೀಡಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.