News Karnataka Kannada
Sunday, April 28 2024
ಮಂಗಳೂರು

ಮಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ !

Siddaramaiah to contest from another constituency, to shift to Kolar, Badami
Photo Credit :

ಮಂಗಳೂರು :  ಕಾಂಗ್ರೆಸ್ ನಿಂದ ಪಂಚ ರಾಜ್ಯ ಚುನಾವಣೆ ಬಳಿಕ ಸಾಫ್ಟ್ ಹಿಂದುತ್ವ ಸುದ್ದಿ ವಿಚಾರ ಮಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ. ಕಾಂಗ್ರೆಸ್ ನದ್ದು ಸಾಫ್ಟ್ ಮತ್ತು ಹಾರ್ಡ್ ಹಿಂದುತ್ವ ಅಂತ ಇಲ್ಲ.

ನಾವು ಹಿಂದೂ ಧರ್ಮದ ಮೇಲೆ ‌ನಂಬಿಕೆ ಇಟ್ಟವರು ಎಲ್ಲಾ ಧರ್ಮಗಳಿಗೂ ಸಮಾನ ಗೌರವ ಕೊಡ್ತೇವೆ. ಹಿಜಾಬ್ ವಿರೋಧಿಸಿ ಮುಸ್ಲಿಂ ಸಂಘಟನೆಗಳ ಬಂದ್ ವಿಚಾರ ಅಸಮಾಧಾನ ಇರೋರು ಬಂದ್ ಮಾಡಿದ್ದಾರೆ, ಕೋರ್ಟ್ ನಿರ್ಧಾರ ವಿರೋಧಿಸಬಾರದು.

ಹೈಕೋರ್ಟ್, ಸುಪ್ರೀಂ ಕೋರ್ಟ್ ಯಾವುದರ ನಿರ್ಧಾರವನ್ನೂ ವಿರೋಧ ಮಾಡಬಾರದು. ಯಾವ ಧರ್ಮದವರೂ ಕೋಮುವಾದ ಮಾಡಬಾರದು. ಹಿಂದೂ, ಮುಸ್ಲಿಂ ಯಾರೇ ಆದರೂ ಕೋಮುವಾದ ಮಾಡಬಾರದು. ಎಲ್ಲಾ ಧರ್ಮಗಳನ್ನ ಸಮಾನವಾಗಿ ಕಾಣುವ ಕೆಲಸ ಆಗಲಿ.

ಶಾಲೆಗಳಲ್ಲಿ ಭಗವದ್ಗೀತೆ ಕಲಿಸೋ ಬಗ್ಗೆ ಚಿಂತನೆ ವಿಚಾರ ನೈತಿಕ ಶಿಕ್ಷಣ ಕಲಿಸೋಕೆ ನಮ್ಮ ಯಾವುದೇ ತಕರಾರು ಇಲ್ಲ. ನಾವು ಸಂವಿಧಾನದ ಜಾತ್ಯಾತೀತ ತತ್ವಗಳನ್ನು ನಂಬುತ್ತೇವೆ. ಭಗವದ್ಗೀತೆ, ಕುರಾನ್, ಬೈಬಲ್ ಯಾವುದನ್ನ ಹೇಳಿಕೊಟ್ಟರೂ ನಮ್ಮ ವಿರೋಧ ಇಲ್ಲ.

ಆದ್ರೆ ಮಕ್ಕಳಿಗೆ ಅಗತ್ಯವಾಗಿ ಗುಣಮಟ್ಟದ ಶಿಕ್ಷಣ ನೀಡಬೇಕು. ಭಗವದ್ಗೀತೆ ಬಗ್ಗೆ ಸರ್ಕಾರ ತೀರ್ಮಾನ ಮಾಡಿಲ್ಲ, ಗುಜರಾತ್ ನಲ್ಲಿ ‌ಮಾಡಿದ್ದಾರೆ ಅಷ್ಟೇ. ಭಗವದ್ಗೀತೆ ಮನೆಯಲ್ಲಿ ಹೇಳಿಕೊಡ್ತಾರೆ, ದೇವರ ಬಗ್ಗೆ ಹೇಳ್ತಾರೆ. ರಾಮಾಯಣ, ಮಹಾಭಾರತ ಎಲ್ಲಾನೂ ಮನೆಯಲ್ಲಿ ಹೇಳಿ ಕೊಡ್ತಾರೆ. ನೈತಿಕ ಶಿಕ್ಷಣ ಬೇಕು, ಆದ್ರೆ ಸಂವಿಧಾನಕ್ಕೆ ವಿರುದ್ದವಾಗಿ ಯಾವುದೂ ನಡೀಬಾರದು.

ನಾನು ಭಗವದ್ಗೀತೆ, ಬೈಬಲ್, ಕುರಾನ್ ಯಾವುದಾದರೂ ವಿರೋಧಿಯೂ ಅಲ್ಲ. ನಮ್ಮದು ಬಹುಸಂಸ್ಕೃತಿ ಇರೋ ರಾಷ್ಟ್ರ, ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಹಿಷ್ಣುತೆ ಮತ್ತು ಸಹಬಾಳ್ವೆಯಲ್ಲಿ ನಂಬಿಕೆ ಇರೋನು ನಾನು.

ಕಾಶ್ಮೀರ್ ಫೈಲ್ ಚಿತ್ರ ಕನ್ನಡಕ್ಕೆ ಡಬ್ ಮಾಡುವ ವಿಚಾರ ಸಿನಿಮಾ ಮಾಡಿ ತೋರಿಸೋದನ್ನ ಬೇಡ ಅನ್ನಲ್ಲ, ಆದರೆ ಸತ್ಯ ತೋರಿಸಲಿ. ಕಾಶ್ಮೀರದ ಉಗ್ರರ ಕೃತ್ಯ, ಪಂಡಿತರ ಜೊತೆಗೆ ಬೇರೆ ಯಾರಿಗೆ ಸಮಸ್ಯೆ ಆಗಿತ್ತು ಹೇಳಬೇಕು. ಆಗ ಯಾರ ಸರ್ಕಾರ ಇತ್ತು, ಏನ್ ಮಾಡಿತ್ತು ಸರ್ಕಾರ ಅಂತ ತೋರಿಸಬೇಕು. ಗುಜರಾತ್ ಘಟನೆ, ಲಖಿನ್ ಪುರ್ ಘಟನೆ ಎಲ್ಲಾನೂ ತೋರಿಸಬೇಕು. ನಾನು ಸಿನಿಮಾಗೆ ಹೋಗಲ್ಲ, ಥಿಯೇಟರ್ ಹೋಗಿ ಸಿನಿಮಾ ನೋಡಲ್ಲ. ಬಹಳ ಸಿನಿಮಾ ನೋಡಲ್ಲ, ಹಾಗೇನೇ ಕಾಶ್ಮೀರ್ ಫೈಲ್ ಕೂಡ. ನೋಡಲ್ಲ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು