News Karnataka Kannada
Monday, April 29 2024
ಮಂಗಳೂರು

ಮಂಗಳೂರಿನ ಜಾಹೀರಾತು ಸಂಸ್ಥೆ ಮ್ಯಾಗನಮ್ ಇಂಟರ್ ಗ್ರಾಫಿಕ್ಸ್ ನ ಮಾಲಕ  ಸುಧೀರ್ ಘಾಟೆ ನಿಧನ

Sudheer
Photo Credit :

ಮಂಗಳೂರು : ಜಾಹೀರಾತು ಸಂಸ್ಥೆ ಮ್ಯಾಗನಮ್ ಇಂಟರ್ ಗ್ರಾಫಿಕ್ಸ್ ನ ಮಾಲಕರಾಗಿದ್ದ  ಸುಧೀರ್ ಘಾಟೆ(೬೪) ಇಂದು ನಿಧನ ಹೊಂದಿದರು. ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ತನ್ನ ವೃತ್ತಿ ಜೀವನವನ್ನು ಆರಂಭಿಸಿ ,೧೯೯೨ ರಲ್ಲಿ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್ ಜಾಹೀರಾತು ಸಂಸ್ಥೆಯನ್ನು ಆರಂಭಿಸಿದರು. ಜಾಹೀರಾತು ಕ್ಷೇತ್ರದಲ್ಲಿ ದಿಗ್ಗಜನಾಗಿ ರಾಷ್ಟ್ರಮಟ್ಟದಲ್ಲಿ ಹೆಸರು ವಾಸಿಯಾಗಿದ್ದರು. ಸಾವಿರಾರು ಮಂದಿಗೆ ಉದ್ಯೋಗದಾತರಾಗಿ ಸುಮಾರು ೫೦೦ಕ್ಕಿಂತಲೂ ಹೆಚ್ಚು ಮಂದಿ ನುರಿತ ಕೆಲಸಗಾರರನ್ನು ತನ್ನ ಗಡಿಯಲ್ಲಿ ಪಳಗಿಸಿದ್ದರು.

1995ರಲ್ಲಿ ಈಗಿನ ವಿಧಾನ ಸಭಾ ಸ್ಪೀಕರ್ ಕಾಗೇರಿಯವರು ಭಾರತೀಯ ಜನತಾ ಪಾರ್ಟಿಯ ರಾಜ್ಯ ಯುವ ಮೋರ್ಚಾದ ಅದ್ಯಕ್ಷರಾಗಿದ್ದ ಸಂಧರ್ಭ, ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸಿದ್ದರು .ಪಿ.ಆರ್.ಐ ಎಸ್ ನ ಅದ್ಯಕ್ಷರಾಗಿ ತಮ್ಮ ಸೇವೆ ಸಲ್ಲಿಸಿದ್ದರು.

ರಾಷ್ಟ್ರ ಮಟ್ಟದ ನಾಯಕರುಗಳಾದ  ದಿವಂಗತ ಅಟಲ್ ಬಿಹಾರಿ ವಾಜಪೇಯಿ, ಸುಷ್ಮಾ ಸ್ವರಾಜ್,ಅಡ್ವಾಣಿ,ಮುರಳಿ ಮನೋಹರ್ ಜೋಷಿ,ರವರಂತಹ ಹಿರಿಯರ ಒಡನಾಟದಲ್ಲಿ ಇದ್ದ ಸುಧೀರ್ ಘಾಟೆಯವರು, ಬಿ ಎಮ್ ಎಸ್,ನ ಪ್ರಧಾನ ಕಾರ್ಯದರ್ಶಿ ಆಗಿದ್ದ ದಿವಂಗತ ಪ್ರಭಾಕರ್ ಘಾಟೆ,ಶಾರದಾ ಘಾಟೆ ದಂಪತಿಗಳ ಸುಪುತ್ರರಾಗಿದ್ದರು.ಪತ್ನಿ, ಪುತ್ರ ಪ್ರಾಂಜಲ ಘಾಟೆ,ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸಂತಾಪ ಸೂಚನೆ:

ಆರ್ ಎಸ್ ಎಸ್ ನ ಕಾರ್ಯ ನಿರ್ವಾಹಕ ದತ್ತಾತ್ರೇಯ ಹೊಸಬಾಳೆ, ಸಹ ಕಾರ್ಯನಿರ್ವಾಹಕ ಮುಕುಂದ್,ಅರ್ ಎಸ್ ಎಸ್ ನ ಪ್ರಭಾಕರ್ ಭಟ್, ದಾಮ ರವೀಂದ್ರ, ಸಂಘ ಚಾಲಕ ವಾಮನ್ ಶೆಣೈ,ಎಂ. ಬಿ.ಪುರಾಣಿಕ್,ಎಂಪಿ ನಳಿನ್ ಕುಮಾರ್ ಕಟೀಲ್, ಮಂತ್ರಿಗಳಾದ ಕೋಟ ಶ್ರೀನಿವಾಸ್ ಪೂಜಾರಿ, ಎಸ್.ಅಂಗಾರ,ಶಾಸಕರುಗಳಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ,ರಾಜೇಶ ನಾಯ್ಕ್,ಸಂಜೀವ್ ಮಠಾಂದೂರು,ಉಮಾನಾಥ ಕೋಟ್ಯಾನ್, ಪ್ರತಾಪ್ ಸಿಂಹ ನಾಯಕ್,ಬಿ.ಎಂ. ಎಸ್ ನ ವಿಶ್ವನಾಥ ಶೆಟ್ಟಿ,ಪ್ರದೀಪ ಕುಮಾರ್ ಕಲ್ಕೂರ, ಸಂಧ್ಯಾ ಪೈ,ವಿಜಯ್ ಸಂಕೇಶ್ವರ,ವಿನಯ್ ಹೆಗ್ಡೆ,ಮೋಹನ್ ಆಳ್ವ, ಕೃಷ್ಣ.ಜೆ.ಪಾಲೇಮಾರ್,ಮಂಜುನಾಥ ಭಂಡಾರಿ,ಸಂತಾಪ ಸೂಚಿಸಿದ್ದಾರೆ.

ಇಂದು ಸಂಜೆ ೩ ಗಂಟೆಗೆ ಮೃತರ ಸ್ವಗೃಹ  ” ನೀಡಂ”ನಗರದ ಕೊಡಿಯಾಲ್ ಬೈಲ್ ನಲ್ಲಿ ಅಂತಿಮ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು