News Karnataka Kannada
Sunday, May 05 2024
ಮಂಗಳೂರು

ಮಂಗಳೂರಿನ ರಾಮಕೃಷ್ಣ ಮಠಕ್ಕೆ 75 ಸಂವತ್ಸರಗಳ ಸಂಭ್ರಮಾಚರಣೆ

Ramakrishna Matt
Photo Credit : News Kannada

ಮಂಗಳೂರು: ರಾಮಕೃಷ್ಣ ಮಠಕ್ಕೆ ಇದೇ ಜೂನ್ 3 ರಂದು 75 ಸಂವತ್ಸರಗಳು ಪರಿಪೂರ್ಣವಾಗುತ್ತಿವೆ. ಈ ಸಂದರ್ಭದಲ್ಲಿ ಜೂನ್ 3 ಮತ್ತು 4 ರಂದು ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಅಮೃತ ಮಹೋತ್ಸವದ ಪ್ರಯುಕ್ತ ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. 3 ರಂದು ಬೆಳಿಗ್ಗೆ 6.30ಕ್ಕೆ ವಿಶೇಷ ಪೂಜೆ, ಹೋಮಹವನ, ಬೆಳಿಗ್ಗೆ 8.15 ಕ್ಕೆ ಮಂಗಳಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪರಮಪೂಜ್ಯ ಶ್ರೀಮತ್ ಸ್ವಾಮಿ ಗೌತಮಾನಂದಜಿ ಮಹರಾಜ್ ದಿವ್ಯ ಸಾನಿಧ್ಯದಲ್ಲಿ ಸಾಧು ಭಕ್ತರ ಶೋಭಾಯಾತ್ರೆ ಶ್ರೀ ಮಠದ ವರೆಗೆ ನಡೆಯಲಿದೆ. ಬಳಿಕ 9.15 ಕ್ಕೆ ,ಶ್ರೀ ಶ್ರೀಮಠದ ನೂತನ ಮಹಾದ್ವಾರದ ಲೋಕಾರ್ಪಣ ಕಾರ್ಯಕ್ರಮ ಜರುಗಲಿದೆ. ಬೆಳಿಗ್ಗೆ 9.30ಕ್ಕೆ ಅಮೃತ ಸದನ – ಸ್ವಾಮಿ ವೀರೇಶ್ವರಾನಂದ ಸಾಧು ನಿವಾಸದ ಉದ್ಘಾಟನೆಯಾಗಲಿದೆ.

ಅಮೃತ ಭವನ ವಿವೇಕಾನಂದ ತರಬೇತಿ ಕೇಂದ್ರದ ಕಟ್ಟಡಕ್ಕೆ 9.45ಕ್ಕೆ ಭೂಮಿಪೂಜೆ ಹಾಗೂ ಅಡಿಗಲ್ಲು ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯ ಭೂಮಿಭೂಜೆಯಲ್ಲಿ ಭಾಗಿಯಾಗಿ ಅಡಿಗಲ್ಲು ಹಾಕಲಿದ್ದಾರೆ. ಮುಖ್ಯ ಅಭ್ಯಾಗತರಾಗಿ ಶ್ರೀ ದಯಾನಂದ ಪೈ ಭಾಗಿಯಾಗುವರು.

ದಿನಾಂಕ ಜೂ.3 ರಂದು ಪೂರ್ವಾಹ್ನ 10 ಗಂಟೆಗೆ ಅಮೃತ ಮಹೋತ್ಸವದ ಹಾಗೂ ‘ಅಮೃತ ಸಂಗಮ’ ಎಂಬ ಎರಡು ದಿನಗಳ ರಾಜ್ಯಮಟ್ಟದ ಸಾಧು ಭಕ್ತ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪರಮಪೂಜ್ಯ ಶ್ರೀಮತ್ ಸ್ವಾಮಿ ಗೌತಮಾನಂದಜಿ ಮಹರಾಜ್ ದಿವ್ಯ ಸಾನಿಧ್ಯದಲ್ಲಿ ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿಯವರು ಅಮೃತ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸ್ವಾಮಿ ಮುಕ್ತಿದಾನಂದಜಿ ವಿಶ್ವಸ್ಥರು ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಬೇಲೂರು ಮಠ, ಪಶ್ಚಿಮ ಬಂಗಾಳ ಹಾಗೂ ಸ್ವಾಮಿ ಜೀತಕಾಮನಂದಜಿ ಅಧ್ಯಕ್ಷರು ರಾಮಕೃಷ್ಣ ಮಠ ಮಂಗಳೂರು ಇವರ ದಿವ್ಯ ಉಪಸ್ಥಿತಿಯಿರಲಿದೆ.

ಘನ ಉಪಸ್ಥಿತಿಯಲ್ಲಿ ಡಾ. ಎಸ್. ವಿನಯ್ ಹೆಗ್ಡೆ, ಮನಸಾ ಮಹಾಪರರಾದ  ಪ್ರೇಮಾನಂದ ಶೆಟ್ಟಿ ಭಾಗಿಯಾಗಲಿದ್ದಾರೆ. ಮುಖ್ಯ ಅಭ್ಯಾಗತರಾಗಿ ಸಂಸದರಾದ  ನಳೀನ್ ಕುಮಾರ್ ಕಟೀಲು, ಶಾಸಕರಾದ  ವೇದವ್ಯಾಸ್ ಕಾಮತ್,  ಮಂಜುನಾಥ್ ಭಂಡಾರಿ ಪೂರ್ವ ಶಾಸಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್,  ಡಿ ಆರ್ ಪಾಟೀಲ್, ಕರ್ನಾಟಕದ ಮುಖ್ಯ ಪೋಸ್ಟ ಮಾಸ್ಟರ್ ಜನರಲ್  ಎನ್. ರಾಜೇಂದ್ರ ಕುಮಾರ್, ಉದ್ಯಮಿಯಾದ  ದಯಾನಂದ ಪೈ ಭಾಗಿಯಾಗಲಿದ್ದಾರೆ.

ಮಂಗಳೂರಿನ ರಾಮಕೃಷ್ಣ ಮಠದ ಅಮೃತ ಮಹೋತ್ಸವದ ಪ್ರಯುಕ್ತ ಅಂಚೆ ಇಲಾಖೆ ವಿಶೇಷ ಅಂಚೆ ಲಕೋಟೆಯನ್ನು ಹೊರತಂದಿದೆ, ಅದನ್ನು 3-6-2022 ರಂದು, ಕರ್ನಾಟಕದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಶ್ರೀ ಎನ್. ರಾಜೇಂದ್ರ ಕುಮಾರ್ ಶ್ರೀಮಠಕ್ಕೆ ಹಸ್ತಾಂತರಿಸಲಿದ್ದಾರೆ. ಶ್ರೀ ಮಠದ ನೂತನ ಸಾಕ್ಷಚಿತ್ರವನ್ನು ಡಾ. ಎನ್ ವಿನಯ ಹೆಗ್ಡೆ ಬಿಡುಗಡೆ ಮಾಡಲಿದ್ದಾರೆ.

ಸ್ವಾಮಿ ಮುಕ್ತಿದಾನಂದಜಿ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಮಠದ ನೂತನ ವೆಬ್‌ಸೈಟ್ ನ್ನು ಶ್ರೀ ನಳಿನ ಕುಮಾರ್ ಕಟೀಲು ಲೋಕಾರ್ಪಣೆ ಮಾಡಲಿದ್ದಾರೆ.

ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ ರಾಮಕೃಷ್ಣ ಮಠದ ಸುಮಾರು 75 ಸನ್ಯಾಸಿಗಳು ಹಾಗೂ ಸುಮಾರು ರಾಜ್ಯದ ಬೇರೆ ಬೇರೆ ಭಾಗದಿಂದ ಭಕ್ತರು ಈ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ. ಅಮೃತ ಸಂಗಮ ಚಿಂತನ ಮಂಥನ ಕಾರ್ಯಕ್ರಮದಲ್ಲಿ 6 ಗೋಷ್ಠಿಗಳಿದ್ದು, ಸುಮಾರು 18 ಸ್ವಾಮಿಜಿಗಳಾದಿಯಾಗಿ ವಿದ್ವಾಂಸರು ಸರಳತೆಯ ಪರಿಕಲ್ಪನೆಯಲ್ಲಿ ತಮ್ಮ ವಿಚಾರಗಳನ್ನು ಮಂಡಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು