News Karnataka Kannada
Saturday, May 04 2024
ಮಂಗಳೂರು

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ ಪ್ರಕರಣಕ್ಕೆ 2ವರ್ಷ!

Airport Bomb
Photo Credit : News Kannada

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ ಪ್ರಕರಣಕ್ಕೆ 2ವರ್ಷ ಗಳಾಗಿದ್ದು ಆರೋಪಿ ಆದಿತ್ಯರಾವ್ ನಗರದ ಸಬ್ ಜೈಲ್ ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ!

ವಿಚಾರಣೆ ಬಹುಪಾಲು ಪೂರ್ಣಗೊಂಡಿದೆ ಕೆಲವು ವಿಚಾರಣೆಗಳಿಗೆ ಖುದ್ದಾಗಿಯೂ ಇನ್ನೂ ಕೆಲವು ವೀಡಿಯೋ ಕಾನ್ಫರೆನ್ಸ್ ಮೂಲಕವೂ ಹಾಜರಾಗಿದ್ದಾನೆ ತನಿಖಾಧಿಕಾರಿಯ ವಿಚಾರಣೆ ಮತ್ತು ಹೇಳಿಕೆ ಪಡೆಯಲು ಬಾಕಿಯಿದೆ .ಕೂರೋಣ ಎರಡನೇ ಅಲೆಯ ಕಾರಣ ಸ್ವಲ್ಪ ವಿಳಂಬವಾಗಿದೆ ಆರೋಪಿಯ ಕೈಬರಹ ಮತ್ತಿತರ ಕೆಲವೇ ವಿಚಾರಣೆ ಬಾಕಿ ಇದೆ ..ಆದಿತ್ಯ ತನ್ನ ಪರವಾಗಿ ಯಾವುದೇ ವಕೀಲರನ್ನು ನೇಮಿಸಿಕೊಂಡಿಲ್ಲ ಸರಕಾರ ವಕೀಲರನ್ನು ನೇಮಿಸಲು ಅವಕಾಶ ನೀಡಿದ್ದರೂ ನಿರಾಕರಿಸಿದ್ದಾನೆ ಎನ್ನಲಾಗಿದೆ

ಆರೋಪಿ ಆದಿತ್ಯ 2020 ಜನವರಿ 20ರಂದು ಬೆಳಿಗ್ಗೆ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ನ ಟಿಕೆಟ್ ಕೌಂಟರ್ ಬಳಿ ಪ್ರಯಾಣಿಕರು ಕುಳಿತುಕೊಳ್ಳಲು ಕುರ್ಚಿ ಯಲ್ಲಿ ಬಾಂಬ್ ಇರಿಸಿ ಬಳಿಕ ಪಾರ್ಕಿಂಗ್ ಪ್ರದೇಶದ ಆಟೋರಿಕ್ಷಾ ಏರಿ ಹೋಗಿದ್ದನು . ಅನುಮಾನಾಸ್ಪದ ಬ್ಯಾಗ್ ಅನ್ನು ಕಂಡ ನಿಲ್ದಾಣದ ಅಧಿಕಾರಿಗಳು ತಜ್ಞರಿಂದ ಪರಿಶೀಲನೆ ಒಳಪಡಿಸಿದಾಗ ಸ್ಫೋಟಕ ಪತ್ತೆಯಾಗಿತ್ತು . ಬಳಿಕ ನಿರ್ಜನ ಪ್ರದೇಶದಲ್ಲಿ ನಿಷ್ಕ್ರಿಯಗೊಳಿಸಲಾಗಿತ್ತು ಆರೋಪಿ ಬೆಂಗಳೂರಿಗೆ ತೆರಳಿ ಜನವರಿ ಇಪ್ಪತ್ತ್ 2ರಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದನು ಹಲಸೂರು ಗೇಟ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು .ಮಂಗಳೂರಿನ ಪೊಲೀಸರು ಬೆಂಗಳೂರಿಗೆ ತೆರಳಿ ಮಂಗಳೂರಿಗೆ ಕರೆತಂದಿದ್ದರು ತನಿಖೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ತಮ್ಮ ಕಸ್ಟಡಿಗೆ ಪಡೆದು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರೂ 2ವರ್ಷಗಳಿಂದ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ

ಜೈಲಿನಲ್ಲಿರುವ ಆದಿತ್ಯ ಬಹುತೇಕ ಮೂಡಿ ಯಾಗಿರುತ್ತಾನೆ ವಿಕ್ಷಿಪ್ತ ಮನೋಭಾವನಾಗಿದ್ದು ಸಹ ಕೈದಿಗಳ ಜತೆ ಬೆರೆಯುವುದು ಅಥವಾ ಮಾತನಾಡುವುದು ತೀರಾ ಕಡಿಮೆ ಯಾರಾದರೂ ಮಾತನಾಡಿಸಿದರೆ ಮಾತ್ರ ಮಾತನಾಡುತ್ತಾನೆ ದೈಹಿಕವಾಗಿ ಆರೋಗ್ಯದಿಂದ ಇದ್ದಾನೆ ಎಂದು ಜೈಲಿನ ಮೂಲಗಳು ತಿಳಿಸಿವೆ

ಆಗಿನ ತನಿಖಾಧಿಕಾರಿಯಾಗಿದ್ದ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಬೆಳ್ಳಿಯಪ್ಪ ತನಿಖೆಯನ್ನು ಪೂರ್ಣಗೊಳಿಸಿ ಏಳ್ನೂರು ಪುಟಗಳ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು ಕೊರೊನಾ ಪ್ರಯುಕ್ತ ಬಾಕಿ ಉಳಿದಿದ್ದ ಗುರುತು ಪತ್ತೆ ಪೆರೇಡ್ ಮತ್ತು ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆಯನ್ನು ಲೊಕ್ಡೌನ್ ತೆರವಾದ ಬಳಿಕ ಪೂರ್ತಿಗೊಳಿಸಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು