ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ ಪ್ರಕರಣಕ್ಕೆ 2ವರ್ಷ ಗಳಾಗಿದ್ದು ಆರೋಪಿ ಆದಿತ್ಯರಾವ್ ನಗರದ ಸಬ್ ಜೈಲ್ ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ!
ವಿಚಾರಣೆ ಬಹುಪಾಲು ಪೂರ್ಣಗೊಂಡಿದೆ ಕೆಲವು ವಿಚಾರಣೆಗಳಿಗೆ ಖುದ್ದಾಗಿಯೂ ಇನ್ನೂ ಕೆಲವು ವೀಡಿಯೋ ಕಾನ್ಫರೆನ್ಸ್ ಮೂಲಕವೂ ಹಾಜರಾಗಿದ್ದಾನೆ ತನಿಖಾಧಿಕಾರಿಯ ವಿಚಾರಣೆ ಮತ್ತು ಹೇಳಿಕೆ ಪಡೆಯಲು ಬಾಕಿಯಿದೆ .ಕೂರೋಣ ಎರಡನೇ ಅಲೆಯ ಕಾರಣ ಸ್ವಲ್ಪ ವಿಳಂಬವಾಗಿದೆ ಆರೋಪಿಯ ಕೈಬರಹ ಮತ್ತಿತರ ಕೆಲವೇ ವಿಚಾರಣೆ ಬಾಕಿ ಇದೆ ..ಆದಿತ್ಯ ತನ್ನ ಪರವಾಗಿ ಯಾವುದೇ ವಕೀಲರನ್ನು ನೇಮಿಸಿಕೊಂಡಿಲ್ಲ ಸರಕಾರ ವಕೀಲರನ್ನು ನೇಮಿಸಲು ಅವಕಾಶ ನೀಡಿದ್ದರೂ ನಿರಾಕರಿಸಿದ್ದಾನೆ ಎನ್ನಲಾಗಿದೆ
ಆರೋಪಿ ಆದಿತ್ಯ 2020 ಜನವರಿ 20ರಂದು ಬೆಳಿಗ್ಗೆ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ನ ಟಿಕೆಟ್ ಕೌಂಟರ್ ಬಳಿ ಪ್ರಯಾಣಿಕರು ಕುಳಿತುಕೊಳ್ಳಲು ಕುರ್ಚಿ ಯಲ್ಲಿ ಬಾಂಬ್ ಇರಿಸಿ ಬಳಿಕ ಪಾರ್ಕಿಂಗ್ ಪ್ರದೇಶದ ಆಟೋರಿಕ್ಷಾ ಏರಿ ಹೋಗಿದ್ದನು . ಅನುಮಾನಾಸ್ಪದ ಬ್ಯಾಗ್ ಅನ್ನು ಕಂಡ ನಿಲ್ದಾಣದ ಅಧಿಕಾರಿಗಳು ತಜ್ಞರಿಂದ ಪರಿಶೀಲನೆ ಒಳಪಡಿಸಿದಾಗ ಸ್ಫೋಟಕ ಪತ್ತೆಯಾಗಿತ್ತು . ಬಳಿಕ ನಿರ್ಜನ ಪ್ರದೇಶದಲ್ಲಿ ನಿಷ್ಕ್ರಿಯಗೊಳಿಸಲಾಗಿತ್ತು ಆರೋಪಿ ಬೆಂಗಳೂರಿಗೆ ತೆರಳಿ ಜನವರಿ ಇಪ್ಪತ್ತ್ 2ರಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದನು ಹಲಸೂರು ಗೇಟ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು .ಮಂಗಳೂರಿನ ಪೊಲೀಸರು ಬೆಂಗಳೂರಿಗೆ ತೆರಳಿ ಮಂಗಳೂರಿಗೆ ಕರೆತಂದಿದ್ದರು ತನಿಖೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ತಮ್ಮ ಕಸ್ಟಡಿಗೆ ಪಡೆದು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರೂ 2ವರ್ಷಗಳಿಂದ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ
ಜೈಲಿನಲ್ಲಿರುವ ಆದಿತ್ಯ ಬಹುತೇಕ ಮೂಡಿ ಯಾಗಿರುತ್ತಾನೆ ವಿಕ್ಷಿಪ್ತ ಮನೋಭಾವನಾಗಿದ್ದು ಸಹ ಕೈದಿಗಳ ಜತೆ ಬೆರೆಯುವುದು ಅಥವಾ ಮಾತನಾಡುವುದು ತೀರಾ ಕಡಿಮೆ ಯಾರಾದರೂ ಮಾತನಾಡಿಸಿದರೆ ಮಾತ್ರ ಮಾತನಾಡುತ್ತಾನೆ ದೈಹಿಕವಾಗಿ ಆರೋಗ್ಯದಿಂದ ಇದ್ದಾನೆ ಎಂದು ಜೈಲಿನ ಮೂಲಗಳು ತಿಳಿಸಿವೆ
ಆಗಿನ ತನಿಖಾಧಿಕಾರಿಯಾಗಿದ್ದ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಬೆಳ್ಳಿಯಪ್ಪ ತನಿಖೆಯನ್ನು ಪೂರ್ಣಗೊಳಿಸಿ ಏಳ್ನೂರು ಪುಟಗಳ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು ಕೊರೊನಾ ಪ್ರಯುಕ್ತ ಬಾಕಿ ಉಳಿದಿದ್ದ ಗುರುತು ಪತ್ತೆ ಪೆರೇಡ್ ಮತ್ತು ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆಯನ್ನು ಲೊಕ್ಡೌನ್ ತೆರವಾದ ಬಳಿಕ ಪೂರ್ತಿಗೊಳಿಸಿದ್ದರು
ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್ ಕುಮಾರ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…
ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ…
ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ತೆಲುಗು ಧಾರಾವಾಹಿ ನಟ…
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…