News Karnataka Kannada
Friday, May 03 2024
ಮಂಗಳೂರು

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರುನಾಮಕರಣ ವಿಚಾರ: ಸ್ಪಷ್ಟನೆ ನೀಡಿದ ವಿ.ಕೆ. ಸಿಂಗ್‌

Vk Singh
Photo Credit :

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಕೋರಿ ಕರ್ನಾಟಕ ಸರಕಾರದಿಂದ ಯಾವುದೇ ಪ್ರಸ್ತಾವನೆ ಕೇಂದ್ರ ಸರಕಾರಕ್ಕೆ ಬಂದಿಲ್ಲ ಎಂದು ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವ ವಿ.ಕೆ. ಸಿಂಗ್‌ ತಿಳಿಸಿದ್ದಾರೆ.

ಮರುನಾಮಕರಣ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯಸಭಾ ಸದಸ್ಯ ಡಾ| ಸುಬ್ರಹ್ಮಣ್ಯ ಸ್ವಾಮಿ ರಾಜ್ಯಸಭೆಯಲ್ಲಿ “ಮಂಗಳೂರು ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಕುರಿತಂತೆ ಬಹುಬೇಡಿಕೆ ಇದೆಯೇ? ಈ ಕುರಿತಂತೆ ಹಲವಾರು ಸಲಹೆಗಳು ಬಂದಿರುವುದು ನಿಜವೇ? ಹಾಗೂ ಮರುನಾಮಕರಣಕ್ಕೆ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂಬುದಾಗಿ ಪ್ರಶ್ನಿಸಿ ಮಾಹಿತಿ ಕೋರಿದ್ದರು.

ರಾಜ್ಯಸಭೆಯಲ್ಲಿ ಫೆ. 7ರಂದು ಸಚಿವ ವಿ.ಕೆ. ಸಿಂಗ್‌ ನೀಡಿರುವ ಉತ್ತರದಲ್ಲಿ, ವಿಮಾನ ನಿಲ್ದಾಣಗಳ ನಾಮಕರಣ/ಮರುನಾಮಕರಣಕ್ಕಾಗಿ ರಾಜ್ಯ ಸರಕಾರಗಳು ರಾಜ್ಯ ಶಾಸನ ಸಭೆಗಳಲ್ಲಿ ಆದ ನಿರ್ಣಯ ಸಹಿತವಾಗಿ ಕಳುಹಿಸುವ ಪ್ರಸ್ತಾವನೆಗಳನ್ನು ಪರಿಗಣಿಸಲಾಗುತ್ತದೆ. ಮಂಗಳೂರು ನಿಲ್ದಾಣಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಸರಕಾರದಿಂದ ಇಂತಹ ಯಾವುದೇ ಪ್ರಸ್ತಾವನೆಬಂದಿಲ್ಲ. ಕೇಂದ್ರ ಸಚಿವ ಸಂಪುಟ ಕೂಡ ಸಂಬಂಧಪಟ್ಟ ಕೇಂದ್ರ ಸಚಿವರು ಹಾಗೂ ಇಲಾಖೆಗಳ ಜತೆ ಸಮಾಲೋಚನೆ ನಡೆಸಿದ ಬಳಿಕ ವಿಮಾನ ನಿಲ್ದಾಣಗಳಿಗೆ ಮರುನಾಮಕರಣ ನಿರ್ಧಾರಗಳನ್ನು ಕೈಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯ, ರಾಣಿ ಅಬ್ಬಕ್ಕ, ಉಳ್ಳಾಲ ಶ್ರೀನಿವಾಸ ಮಲ್ಯ ಮುಂತಾದವರ ಹೆಸರುಗಳನ್ನು ಇಡಬೇಕು ಎಂಬ ಬೇಡಿಕೆಗಳು ಇವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು