ಮಂಗಳೂರು: ಕುದ್ರೋಳಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಸ್ಸಾಂ ಮೂಲದ ವಿವಾಹಿತೆ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ . ಪ್ರಕರಣ ಸಂಬಂಧ ಪತಿ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .
ಅಸ್ಸಾಂ ಮೂಲದ ಸೋಫಿಯಾ ಬೇಗಂ ಮೃತ ವಿವಾಹಿತೆ . ಯುವತಿ ಅಸ್ಸಾಂ ಮೂಲದ ಸೋಫಿಯಾ ಬೇಗಂ ಎಂಬಾಕೆಯನ್ನ ಸೈದುಲ್ಲ ಎಂಬಾತನ ಪ್ರೀತಿಸಿ ಮದುವೆಯಾಗಿದ್ದಳು ತಮ್ಮ ಊರು ತೊರೆದು ಬಂದಿದ್ದ ಇವರು ನಗರ ಕುದ್ರೋಳಿ ಬಳಿ ಸುಮಾರು 5ತಿಂಗಳಿಂದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು .ಸೈದುಲ್ಲಾ ಪೈಂಟಿಂಗ್ ಕೆಲಸ ಮಾಡುತ್ತಿದ್ದ ಆತನೊಂದಿಗೆ ಇತರ ಇಬ್ಬರು ಸ್ನೇಹಿತರು ಕೂಡ ಇದ್ದರು ಅವರು ಕೂಡ ಇದೇ ಮನೆಯಲ್ಲಿ ನೆಲೆಸಿದ್ದರು ಎನ್ನಲಾಗಿದೆ .
ಶುಕ್ರವಾರ ಮುಂಜಾನೆ 4ಗಂಟೆಗೆ ಸೋಫಿಯಾ ಬೇಗಂ ಎದ್ದು ಅಡುಗೆ ಕೆಲಸ ಮಾಡಿ ಮಲಗಿದ್ದು ಬೆಳಿಗ್ಗೆ 7ನಲವತ್ತೈದಕ್ಕೆ ಸೈದುಲ್ಲಾ ಎಚ್ಚರಗೊಂಡು ನೋಡಿದಾಗ ತಾನು ಮಲಗಿದ್ದ ಕೋಣೆಯ ಕಿಟಕಿಯ ಕಬ್ಬಿಣದ ಸರಳಿಗೆ ಚೂಡಿದಾರದ ಶಾಲನ್ನು ಕುತ್ತಿಗೆಗೆ ಕಟ್ಟಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಬಳಿಕ ಆಕೆಯನ್ನು ಶಾಲೆಯಿಂದ ಬಿಡಿಸಿ ನೆಲದಲ್ಲಿ ಮಲಗಿಸಿ ನೆರೆಹೊರೆಯವರಿಗೆ ತಿಳಿಸಿರುವುದಾಗಿ ಆರೋಪಿ ಪತಿ ಸೈದುಲ್ಲಾ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾನೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು ಪತಿ ಕುತ್ತಿಗೆ ಬಿಗಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ .ಈ ನಿಟ್ಟಿನಲ್ಲಿ ಸೈದುಲ್ಲಾ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ . ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ನಿಖರವಾಗಿ ತಿಳಿದುಬಂದಿಲ್ಲ ಮಂಗಳೂರು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ನಡೆಯುತ್ತಿದೆ