News Karnataka Kannada
Friday, May 03 2024
ಮಂಗಳೂರು

ಮಂಗಳೂರು: ಅಸ್ಸಾಂ ಮೂಲದ ವಿವಾಹಿತೆ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

Suicide Case
Photo Credit : News Kannada

ಮಂಗಳೂರು: ಕುದ್ರೋಳಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಸ್ಸಾಂ ಮೂಲದ ವಿವಾಹಿತೆ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ . ಪ್ರಕರಣ ಸಂಬಂಧ ಪತಿ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .

ಅಸ್ಸಾಂ ಮೂಲದ ಸೋಫಿಯಾ ಬೇಗಂ ಮೃತ ವಿವಾಹಿತೆ . ಯುವತಿ ಅಸ್ಸಾಂ ಮೂಲದ ಸೋಫಿಯಾ ಬೇಗಂ ಎಂಬಾಕೆಯನ್ನ ಸೈದುಲ್ಲ ಎಂಬಾತನ ಪ್ರೀತಿಸಿ ಮದುವೆಯಾಗಿದ್ದಳು ತಮ್ಮ ಊರು ತೊರೆದು ಬಂದಿದ್ದ ಇವರು ನಗರ ಕುದ್ರೋಳಿ ಬಳಿ ಸುಮಾರು 5ತಿಂಗಳಿಂದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು .ಸೈದುಲ್ಲಾ ಪೈಂಟಿಂಗ್ ಕೆಲಸ ಮಾಡುತ್ತಿದ್ದ ಆತನೊಂದಿಗೆ ಇತರ ಇಬ್ಬರು ಸ್ನೇಹಿತರು ಕೂಡ ಇದ್ದರು ಅವರು ಕೂಡ ಇದೇ ಮನೆಯಲ್ಲಿ ನೆಲೆಸಿದ್ದರು ಎನ್ನಲಾಗಿದೆ .

ಶುಕ್ರವಾರ ಮುಂಜಾನೆ 4ಗಂಟೆಗೆ ಸೋಫಿಯಾ ಬೇಗಂ ಎದ್ದು ಅಡುಗೆ ಕೆಲಸ ಮಾಡಿ ಮಲಗಿದ್ದು ಬೆಳಿಗ್ಗೆ 7ನಲವತ್ತೈದಕ್ಕೆ ಸೈದುಲ್ಲಾ ಎಚ್ಚರಗೊಂಡು ನೋಡಿದಾಗ ತಾನು ಮಲಗಿದ್ದ ಕೋಣೆಯ ಕಿಟಕಿಯ ಕಬ್ಬಿಣದ ಸರಳಿಗೆ ಚೂಡಿದಾರದ ಶಾಲನ್ನು ಕುತ್ತಿಗೆಗೆ ಕಟ್ಟಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ  ಬಳಿಕ ಆಕೆಯನ್ನು ಶಾಲೆಯಿಂದ ಬಿಡಿಸಿ ನೆಲದಲ್ಲಿ ಮಲಗಿಸಿ ನೆರೆಹೊರೆಯವರಿಗೆ ತಿಳಿಸಿರುವುದಾಗಿ ಆರೋಪಿ ಪತಿ ಸೈದುಲ್ಲಾ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾನೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು ಪತಿ ಕುತ್ತಿಗೆ ಬಿಗಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ .ಈ ನಿಟ್ಟಿನಲ್ಲಿ ಸೈದುಲ್ಲಾ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ . ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ನಿಖರವಾಗಿ ತಿಳಿದುಬಂದಿಲ್ಲ ಮಂಗಳೂರು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ನಡೆಯುತ್ತಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು