News Karnataka Kannada
Tuesday, April 30 2024
ಮಂಗಳೂರು

ಮಂಗಳೂರು: ಉಳ್ಳಾಲ ಸಿಸಿ ಕ್ಯಾಮರಾ ತಡೆಬೇಲಿ ಧ್ವಂಸ, ನಾಲ್ವರ ಸೆರೆ

Mangaluru
Photo Credit : By Author

ಮಂಗಳೂರು: ಸೋಮೇಶ್ವರ ಸಮುದ್ರ ತೀರದಿಂದ ನಿರಂತರವಾಗಿ ಮರಳು ಕಳ್ಳತನ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಹಾಕಿದ್ದ ಸಿಸಿ ಕ್ಯಾಮರ ಮತ್ತು ತಂತಿ ತಡೆಬೇಲಿ ಧ್ವಂಸಗೈದ ನಾಲ್ವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು ಕೃತ್ಯಕ್ಕೆ ಬಳಸಿದ ಟಿಪ್ಪರ್ ನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಮಡ್ಯಾರ್ ಸಾಯಿ ನಗರ ನಿವಾಸಿ ಸೂರಜ್ , ಮುಡಿಪು ಮದ್ಯನಡ್ಕ ನಿವಾಸಿ ಇಕ್ಬಾಲ್ ,ತಲಪಾಡಿ ನಿವಾಸಿ ಅಖಿಲ್ ,ಸೋಮೇಶ್ವರ ನಿವಾಸಿ ಪ್ರಜ್ವಲ್ ಬಂಧಿತರು ಅವರು ಕೃತ್ಯಕ್ಕೆ ಬಳಸಿದ ಟಿಪ್ಪರ್ ನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಸೋಮೇಶ್ವರ ದೇವಸ್ಥಾನ ಬಳಿಯಿಂದ ಮತ್ತು ಗಡಿಭಾಗ ಮೂಡ ಲೇಔಟ್ ಬಳಿಯ ಸಮುದ್ರದಿಂದ ನಿರಂತರವಾಗಿ ಮರಳು ಸಾಗಟ ಅಕ್ರಮವಾಗಿ ನಡೆಯುತ್ತಿತ್ತು ,ಸ್ಥಳೀಯರ ವಿರೋಧದ ನಡುವೆ ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ ಬೀಚ್ ಬದಿಯ ಸಮುದ್ರಕ್ಕೆ ಘನ ವಾಹನಗಳು ತೆರಳದಂತೆ ತಂತಿಬೇಲಿಯನ್ನು ಹಾಕಲಾಗಿತ್ತು ಮತ್ತು ಸಿಸಿ ಕೆಮರಾಗಳನ್ನು ಅಳವಡಿಸಲಾಗಿತ್ತು .

ಸಿಸಿ ಕ್ಯಾಮರಾ ಅಳವಡಿಕೆ ಮರಳುಗಳ್ಳರಿಗೆ ತೊಂದರೆಯಾಗಿದ್ದು ಮರಳು ಸಾಗಾಟ ದಾರರು ಯುವಕರು ಮುಸುಕುಧಾರಿಗಳಾಗಿ ಕಳುಹಿಸಿ ಕೃತ್ಯ ನಡೆಸಿದ್ದರು .ಘಟನೆಯಿಂದ ಸುಮಾರು ಎಪ್ಪತ್ತೈದು ಸಾವಿರ ನಷ್ಟ ಅಂದಾಜಿಸಲಾಗಿದೆ , 1 ಸಿಸಿ ಕ್ಯಮೆರಾವನ್ನು ಟಿಪ್ಪರ್ ಮೂಲಕ ಧ್ವಂಸ ಮಾಡುವ ಚಿತ್ರಣ ವೈಫೈ ಮೂಲಕ ಸಿಸಿ ಕೆಮರಾದಲ್ಲಿ ದಾಖಲಾಗಿದ್ದು ಉಳ್ಳಾಲ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು