ಮಂಗಳೂರು

ಮಂಗಳೂರು: ಕ್ರಿಶ್ಚಿಯನ್ ಪ್ರಾರ್ಥನಾ ಕೇಂದ್ರ ಧ್ವಂಸ

ಮಂಗಳೂರು : ನಗರ ಹೊರವಲಯದ ಪಂಜಿಮೊಗರಿನ ಉರುಂದಾಡಿ ಖುರ್ಸು ಗುಡ್ಡೆಯಲ್ಲಿ ಪ್ರಾರ್ಥನಾ ಕೇಂದ್ರ ಒಡೆದಿರುವ ಬಗ್ಗೆ ತಕರಾರು ಎದ್ದಿದೆ.  ಕ್ರಿಶ್ಚಿಯನ್ನರ ಪ್ರಕಾರ ನಲವತ್ತು ವರ್ಷಗಳಿಂದಲೂ ಹೋಲಿಕ್ರಾಸ್ ಇದೆಯಂತೆ ಕಟ್ಟಡದಲ್ಲಿ ಪ್ರಾರ್ಥನ ನಡೆಸುತ್ತಿದ್ದರಂತೆ ಈಗಲೂ ಹಳೆಯ ಹೋಲಿಕ್ರಾಸ್ ಸ್ಥಳದಲ್ಲಿವೆ ಆದರೆ ಈಗ ವಿವಾದಕ್ಕೆ ಕಾರಣವಾಗಿದ್ದು ಅಲ್ಲಿದ್ದ ಹಳೆಯ ಕಟ್ಟಡ ಒಂದನ್ನು ಏಕಾಏಕಿ ಕೆಡವಿ ಹಾಕಿದ್ದು ಈ ಬಗ್ಗೆ ಸ್ಥಳೀಯರಲ್ಲಿ ಕೇಳಿದರೆ ಬೇರೆಯದ್ದೇ ಮಾತು ಹೇಳುತ್ತಾರೆ .

ಉರುಂದಾಡಿ ಯಲ್ಲಿ ಹಿಂದಿನಿಂದಲೂ ಅಂಗನವಾಡಿ ಇತ್ತಂತೆ ಸರಕಾರಿ ಜಾಗದಲ್ಲಿ ಅಂಗನವಾಡಿ ಕಟ್ಟಡ ಇದ್ದರೂ ಅದನ್ನು ಕ್ರಿಶ್ಚಿಯನ್ನರು ನೋಡಿಕೊಂಡಿದ್ದರು ಕಟ್ಟಡದ 1ಬದಿಯಲ್ಲಿ ಅಂಗನವಾಡಿ ಮತ್ತೊಂದು ಬದಿಯಲ್ಲಿ ಪ್ರಾರ್ಥನೆಗೆಂದು ಕೊಠಡಿ ಇತ್ತಂತೆ ಆದರೆ ಕಟ್ಟಡವು ಶಿಥಿಲವಾಗಿದ್ದರಿಂದ ಹೊಸದಾಗಿ ಕಟ್ಟಡ ಕಟ್ಟಲು ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಇತ್ತೀಚೆಗೆ ಸರ್ವೇ ನಡೆಸಲಾಗಿತ್ತು.

ಸರಕಾರಿ ಜಾಗದಲ್ಲಿ ಅಂಗನವಾಡಿ ಕಟ್ಟಡ ಇರುವುದರಿಂದ ಹೊಸದಾಗಿ ಕಟ್ಟಡ ನಿರ್ಮಾಣಕ್ಕೆ ಅಂದಾಜು 16ಲಕ್ಷ ರೂ ಅನುದಾನ ಬಿಡುಗಡೆಯಾಗಿದ್ದು ಅದಕ್ಕಾಗಿ ಟೆಂಡರ್ ಕೂಡ ಆಗಿತ್ತು ಎನ್ನಲಾಗುತ್ತಿದೆ .ಅದರಂತೆ ಶನಿವಾರ ಮಧ್ಯಾಹ್ನ ಟೆಂಡರ್ ಪಡೆದ ಗುತ್ತಿಗೆದಾರ ಜೆಸಿಬಿ ತಂದು ಹಳೆ ಕಟ್ಟಡವನ್ನು ಕೆಡವಿ ಹಾಕಿದ್ದಾರೆ ಆದರೆ ಯಾರು ಕೆಡವಿ ಹಾಕಿದ್ದಾರೆಂದು ನಮಗೆ ಗೊತ್ತಿಲ್ಲ ಎನ್ನುತ್ತಾರೆ ಸ್ಥಳೀಯರು .

ಏಕಾಏಕಿ ಬಂದು ಕಟ್ಟಡವನ್ನು ಕೆಡವಿ ಸ್ಥಳಿಯ ಕ್ರಿಶ್ಚಿಯನ್ನರನ್ನು ಕೆರಳಿಸಿದೆ ಕಟ್ಟಡದ ಒಳಗೆ ಶಿಲುಬೆ , ಪವಿತ್ರ ಬೈಬಲ್ ಇತ್ತು ಅದರ ತೆರವು ಮಾಡದೆ ಏಕಾಏಕಿ ಕೆಡವಿ ಹಾಕಿದ್ದಾರೆ. ನಾವು ಏನು ಪಾಪ ಮಾಡಿದ್ದೇವೆ ಎಂದು ಸ್ಥಳೀಯ ಕ್ರೈಸ್ತರು ಆತಂಕ ತೋಡಿಕೊಂಡಿದ್ದಾರೆ.

Gayathri SG

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

33 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

58 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago