News Karnataka Kannada
Thursday, May 09 2024
ಮಂಗಳೂರು

ಮಂಗಳೂರು : ಗೋಡೆಬರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ಜಾಮೀನು

New Project (8)
Photo Credit :

ಮಂಗಳೂರು  : ಕಳೆದ ಡಿಸೆಂಬರ್ ತಿಂಗಳಿನಲ್ಲಿ ಮಂಗಳೂರಿನ ಜನರನ್ನು ದಂಗುಬಡಿಸಿದ ಗೋಡೆಬರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ಜಾಮೀನು ಲಭಿಸಿದ್ದು ಜೈಲಿನಿಂದ ಬಿಡುಗಡೆಯಾಗಿದ್ದಾರೆ . ಇಬ್ಬರು ಆರೋಪಿಗಳಿಗೆ ಮಂಗ್ಳೂರಿನ ಕೋರ್ಟ್ ನಲ್ಲಿ ಜಾಮೀನು ಸಿಗದೆ 9ತಿಂಗಳ ಬಳಿಕ ಹೈಕೋರ್ಟ್ ನಲ್ಲಿ ಜಾಮೀನು ಪಡೆದಿದ್ದಾರೆ . ಆರೋಪಿಗಳ ಪೈಕಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದ ಮಾಜ್ ಮುನೀರ್ ಅಹ್ಮದ್ ಗೆ ಪ್ರಕರಣದ 2ತಿಂಗಳಲ್ಲಿ ಮಂಗಳೂರು ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ಲಭಿಸಿತ್ತು ಇನ್ನಿಬ್ಬರು ಆರೋಪಿಗಳಿಗೆ ಮಂಗಳೂರಿನ ನ್ಯಾಯಾಲಯದಲ್ಲಿ ಜಾಮೀನು ಲಭಿಸಿರಲಿಲ್ಲ ಆನಂತರ ಹೈಕೋರ್ಟ್ ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಕಾದಿರಿಸಿತ್ತು ವಾರದ ಹಿಂದೆ ಜಾಮೀನು ನೀಡಿ ಹೈಕೋರ್ಟ್ ತೀರ್ಪು ನೀಡಿತ್ತು

2ಸಾವಿರದ ಇಪ್ಪತ್ತ ರ ನವೆಂಬರ್ ಇಪ್ಪತ್ತ್ 7ರಂದು ಕದ್ರಿ ಠಾಣೆ ವ್ಯಾಪ್ತಿಯ ಬಿಜೆಪಿ ಬಳಿ ಗೋಡೆ ಬರಹ ಕಂಡು ಬರೆದಿತ್ತು ಇಲ್ಲಿ ಸಂಗಿಗಳು ಮತ್ತು ಮನುವಾದಿಗಳು ಜೊತೆ ವ್ಯವಹರಿಸಲು ಲಷ್ಕರ್ ಮತ್ತು ತಾಲಿಬಾನಿಗಳನ್ನು ಬರುವಂತೆ ಮಾಡಬೇಡಿ ಲಷ್ಕರ್ ಜಿಂದಾಬಾದ್ ತಾಲಿಬಾನ್ ಜಿಂದಾಬಾದ್ ಎಂದು ಇಂಗ್ಲಿಷ್ ನಲ್ಲಿ ಬರೆಯಲಾಗಿತ್ತು ಎಲ್ಲರಿಗೂ ಕಾಣುವಂತೆ ಅಪಾರ್ಟ್ ಮೆಂಟ್ ವೊಂದರ ಆವರಣಗೋಡೆಯಲ್ಲಿ ಬರೆಯಲಾಗಿದ್ದ ಬರಹದ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿತ್ತು ಮಂಗಳೂರಿನ ಹಿಂದೂ ಸಂಘಟನೆಗಳನ್ನು ಗುರಿಯಾಗಿಸಿ ಬರಹ ಬರೆದಿದ್ದ ಕಾರಣ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದರು ಮಂಗಳೂರಿನ ಉಗ್ರವಾದಿಗಳ ಸಂಪರ್ಕ ಹೊಂದಿರುವ ಇದಕ್ಕೆ ಸಾಕ್ಷಿ ಎಂದು ಆರೋಪಿಸಿದ್ದರು

ಅನಂತರ ವಾರದ ಅಂತರದಲ್ಲಿ ಕದ್ರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು ಇಂಜಿನಿಯರಿಂಗ್ ವಿದ್ಯಾರ್ಥಿ ಮಾಜ್ ಮುನೀರ್ ಅಹ್ಮದ್ ಮತ್ತು ಮುಹಮ್ಮದ್ ಶಾರೀಕ್ ಗೋಡೆ ಬರಹ ಬರೆದ ಆರೋಪಿಗಳಾಗಿದ್ದು ಇಬ್ಬರೂ ತೀರ್ಥಹಳ್ಳಿ ಮೂಲದವರಾಗಿದ್ದರೂ ಮಾಜ್ ಮುನೀರ್ ಮಂಗಳೂರು ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮಾಡಿಕೊಂಡು ಆರ್ಯಸಮಾಜ ರಸ್ತೆಯಲ್ಲಿ ಫ್ಲ್ಯಾಟ್ ಒಂದರಲ್ಲಿ ನೆಲೆಸಿದ್ದ ಶಾರುಖ್ ಗೆಳೆಯನಾಗಿದ್ದ ಮಂಗಳೂರಿನಲ್ಲಿ ಸೇಲ್ಸ್ ಮ್ಯಾನ್ ಆಗಿದ್ದ ಅನಂತರ ವಾರದ ನಂತರ ಇವರಿಬ್ಬರೂ ಆಶ್ರಯ ಮತ್ತು ಹಣಕಾಸು ನೆರವು ನೀಡಿದ ಆರೋಪದಲ್ಲಿ ಸಾದತ್ ಹುಸೇನ್ ಎಂಬಾತನನ್ನು ಬಂಧಿಸಲಾಗಿತ್ತು

ಗೋಡೆಬರಹ ಪ್ರಕರಣ ದೇಶದ ಗಮನ ಸೆಳೆಯುತ್ತಿದ್ದಂತೆ ಎನ್ಐಎ ಅಧಿಕಾರಿಗಳು ಮಂಗಳೂರಿಗೆ ಬಂದು ಆರೋಪಿಗಳನ್ನು ವಿಚಾರಣೆ ನಡೆಸಿದ್ದರು ಆದರೆ ಈವರೆಗೆ ಬೇರ್ಯಾವುದೇ ಟೆರರ್ ಲಿಂಕ್ ಇಲ್ಲ ಎಂಬ ಹಿನ್ನಲೆಯಲ್ಲಿ ವಿಚಾರಣೆ ನಡೆಸಿ ಹಿಂದುರಿಗಿದ್ದರು ಅನಂತರ ಮಾಸ್ ಮುನೀರ್ ವಿದ್ಯಾರ್ಥಿಯಾಗಿದ್ದ ನೆಲೆಯಲ್ಲಿ 2ತಿಂಗಳಲ್ಲಿ ಜಾಮೀನು ಲಭಿಸಿತ್ತು ಮುಹಮ್ಮದ್ ಶಾರೀಕ್ ಮತ್ತು ಸಾದತ್ ಹುಸೇನ್ ಜಾಮೀನು ಸಿಗದೆ ಜೈಲಿನಲ್ಲೇ ಇದ್ದರು ಇದೀಗ ವಾರದ ಹಿಂದೆ ಹೈಕೋರ್ಟ್ ನಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು