News Karnataka Kannada
Monday, April 29 2024
ಮಂಗಳೂರು

ಮಂಗಳೂರು ದಸರಾಕ್ಕೆ ಚಾಲನೆ ನೀಡಿದ ಸಂಸದ ನಳಿನ್ ಕುಮಾರ್ ಕಟೀಲು

New Project (95)
Photo Credit :

ಮಂಗಳೂರು: ನವರಾತ್ರಿ ಉತ್ಸವದ ಅಂಗವಾಗಿ ನಡೆಯಲಿರುವ ಮಂಗಳೂರು ದಸರಾಕ್ಕೆ ನಗರದ ಕುದ್ರೋಳಿ ಕ್ಷೇತ್ರ, ಮಂಗಳಾದೇವಿ ಕ್ಷೇತ್ರ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಚಾಲನೆ ನೀಡಲಾಯಿತು.

ಮಂಗಳೂರು ದಸರಾ ಸರಕಾರದ ಭಾಗವಾಗಿ ಆಚರಣೆಯಾಗುತ್ತಿದು ಜನರ ಹಬ್ಬವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.ಮಂಗಳೂರು ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಮಂಗಳೂರು ಮಹಾನಗರ ಪಾಲಿಕೆಯ ರಾಜಬೀದಿಯ ಅಲಂಕಾರವನ್ನು ವಹಿಸಿದೆ. ಈ ಬಾರಿ ಮಂಗಳೂರು ಮಹಾ ನಗರ ಪಾಲಿಕೆ ವಹಿಸಿದ್ದು ಇದು ಉತ್ತಮ ಬೆಳವಣಿಗೆ. ಮೈಸೂರು ದಸರಾ ರೀತಿಯಲ್ಲಿ ಮಂಗಳೂರು ದಸರಾ ನಡೆಯುತ್ತಿದೆ ಎಂದು ಅವರು ಹೇಳಿದರು.

ಇಂದಿನಿಂದ ಅ.16ರವರೆಗೆ ನಡೆಯಲಿರುವ ನವರಾತ್ರಿ ಉತ್ಸವದ ಅಂಗವಾಗಿ ಕುದ್ರೋಳಿ ಕ್ಷೇತ್ರದಲ್ಲಿ ನವ ದುರ್ಗೆಯರು, ಗಣಪತಿ ಹಾಗೂ ಶಾರದಾ ಮಾತೆಯ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು.

ಕ್ಷೇತ್ರದ ಅಂಗಣದಲ್ಲಿ ಮೂರ್ತಿಗಳ ಪ್ರದಕ್ಷಿಣೆ ನಡೆಸಿ ಬಳಿಕ ದಸರಾ ದರ್ಬಾರು ಮಂಟಪದಲ್ಲಿ ಮೂರ್ತಿಗಳ ಪ್ರತಿಷ್ಠಾಪನೆಯನ್ನು ಧಾರ್ಮಿಕ ವಿಧಿ ವಿಧಾನಗಳ ಮೂಲಕ ನಡೆಸಲಾಯಿತು.

ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಕ್ಷೇತ್ರಾಡಳಿತ ಸಮಿಯ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಮೂಡ ಅಧ್ಯಕ್ಷ ರವಿಶಂಕರ ಮಿಜಾರು, ಹರಿಕೃಷ್ಣ ಬಂಟ್ವಾಳ, ಶಶಿಧರ ಹೆಗ್ಡೆ, ಪದ್ಮ ರಾಜ್ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು