News Karnataka Kannada
Sunday, May 05 2024
ಮಂಗಳೂರು

ಮಂಗಳೂರು : ನ.2ರಂದು ವಿವಿಧ ಕಾಮಗಾರಿಗಳ ಶಿಲಾನ್ಯಾಸ

News
Photo Credit :

ಮಂಗಳೂರು : ಇಲ್ಲಿನ ಸ್ಮಾಟ್‍ಸಿಟಿ ಲಿ ವತಿಯಿಂದ ಊರ್ವ ಮಾರುಕಟ್ಟೆ ಬಳಿ ಉದ್ದೇಶಿತ ಕಬಡ್ಡಿ ಹಾಗೂ ಬ್ಯಾಡ್ಮಿಂಟನ್ ಕೋರ್ಟ್‍ಗಳನ್ನೊಳಗೊಂಡ ಒಳಾಂಗಣ ಕ್ರೀಡಾಂಗಣ ರಚನೆ ಕಾಮಗಾರಿ (ಅಂದಾಜು ಮೊತ್ತ-20.54 ಕೋಟಿ) ಮತ್ತು ಹಂಪನಕಟ್ಟ ಹಳೆ ಬಸ್ ನಿಲ್ದಾಣದ ಬಳಿ ಪಿಪಿಪಿ ಉದ್ದೇಶಿತ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣ ನಿರ್ಮಾಣದ ಕಾಮಗಾರಿ (ಅಂದಾಜು ಮೊತ್ತ-70 ಕೋಟಿ) ಗಳ ಶಿಲಾನ್ಯಾಸ ಸಮಾರಂಭವನ್ನು ನವೆಂಬರ್ 2ರ ಬೆಳಿಗ್ಗೆ 11 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು ಶಿಲಾನ್ಯಾಸ ನೆರವೇರಿಸುವರು. ಮೇಯರ್ ಪ್ರೇಮಾನಂದ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಅಂಗಾರ. ಎಸ್ ಅವರು ದ್ವೀಪ ಪ್ರಜ್ವಲನ ಮಾಡಲಿದ್ದಾರೆ.

ಶಾಸಕರಾದ ವೇದವ್ಯಾಸ ಕಾಮತ್ ಘನ ಉಪಸ್ಥಿತಿ ವಹಿಸುವರು, ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ.ಭರತ್ ಶೆಟ್ಟಿ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕಿಯೋನಿಸ್ಕ್ ಅಧ್ಯಕ್ಷರಾದ ಹರಿಕೃಷ್ಣ ಕೆ. ಬಂಟ್ವಾಳ್, ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರು, ಕರ್ನಾಟಕ ಮೀನುಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ನಿತೀನ್ ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಉಪ ಮೇಯರ್ ಸುಮಂಗಳ ರಾವ್ ಭಾಗವಹಿಸುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು