News Karnataka Kannada
Friday, May 10 2024
ಮಂಗಳೂರು

ಮಂಗಳೂರು: ಪತಿಯ ಸಾವಿನ ಸುದ್ದಿ ಕೇಳಿ ಮಗುವನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಪತ್ನಿ

Suicide
Photo Credit :

ಮಂಗಳೂರು : ನಗರದ ಕುಂಟಿಕಾನ ಬಳಿ ಶನಿವಾರ ರಾತ್ರಿ ರಸ್ತೆ ದಾಟುವ ವೇಳೆ ಕಾರೊಂದು ಡಿಕ್ಕಿಯಾದ ಪರಿಣಾಮ ಅಗ್ನಿಶಾಮಕ ಸಿಬ್ಬಂದಿ ಮೃತಪಟ್ಟಿದ್ದು, ಈ ಸುದ್ದಿ ಕೇಳಿದ ಆ ವ್ಯಕ್ತಿಯ ಪತ್ನಿ 6 ತಿಂಗಳ ಮಗುವನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಡೆದಿದೆ.

ಮಂಗಳೂರಿನ ಕುಂಟಿಕಾನ ಅಗ್ನಿಶಾಮಕ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಯಚೂರು ಮೂಲದ ಸಿಬ್ಬಂದಿ ಗಂಗಾಧರ ಬಿ. ಕಮ್ಮಾರ (36) ಅವರು ಅಪಘಾತದಲ್ಲಿ ಮೃತಪಟ್ಟವರು. ಅವರ ಪತ್ನಿ ರಾಯಚೂರು ನಿವಾಸಿ ಶೃತಿ (30) ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡವರು.

ಶನಿವಾರ ರಾತ್ರಿ ವೇಳೆ ಕುಂಟಿಕಾನ ಅಗ್ನಿಶಾಮಕ ಕಚೇರಿ ಸಮೀಪ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದಾಗ ಬೆಂಗಳೂರಿನಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದ್ದು, ಗಂಗಾಧರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸುದ್ದಿಯನ್ನು ಮನೆಯವರಿಗೆ ತಿಳಿಸಲಾಗಿದ್ದು, ಈ ಆಘಾರದಿಂದ ಅವರ ಪತ್ನಿ ಶೃತಿ ರಾತ್ರಿ 10ಗಂಟೆ ವೇಳೆಗೆ ತನ್ನ 6 ತಿಂಗಳ ಪುತ್ರನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿನ ಮೂಲಕ ಇಡೀ ಕುಟುಂಬ ಒಂದೇ ದಿನ ಸಾವಿಗೀಡಾದಂತಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು