ಮಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ 26ರಿಂದ 27ನೇ ಫೆಬ್ರವರಿ, 2022ರ ವರೆಗೆ ಬೋಳೂರಿನ ಅಮೃತ ವಿದ್ಯಾಲಯಂ ನಲ್ಲಿ ಚಿಣ್ಣರ ಹಬ್ಬವನ್ನು ಆಯೋಜಿಸಲಾಗಿದೆ. ಇದರ ಅಂಗವಾಗಿ ಮಂಗಳೂರು ನಗರದ ಮಕ್ಕಳಿಗಾಗಿ ಅನೇಕ ಸ್ಪರ್ಧೆಗಳನ್ನು ಕೈಗೊಳ್ಳಲಾಗುವುದು.
ಕೊರೋನಾ ಪಿಡುಗು ಆವರಿಸಿದ ಸಮಯದಿಂದ ಮಕ್ಕಳು ದೂರ ಮಾಧ್ಯಮದ ಶಿಕ್ಷಣವನ್ನು ಪಡೆಯುತ್ತಿದ್ದು, ಬಹಳಷ್ಟು ಕಾಲ ಶಾಲೆಗಳಿಂದ ದೂರ ಉಳಿದಿದ್ದಾರೆ. ಇದರ ಪರಿಣಾಮವನ್ನು ಕಡಿಮೆಗೊಳಿಸುವ ಸಲುವಾಗಿ ಚಿಣ್ಣರ ಹಬ್ಬವನ್ನು ಆಯೋಜಿಸಲಾಗುತ್ತಿದ್ದು, ಈ ಕಷ್ಟಕಾಲದಲ್ಲಿ ಮಕ್ಕಳ ಬೆಳವಣಿಗೆಯ ಮೇಲೆ ಆಗಿರುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿರುತ್ತೇವೆ.
ಎಲ್ಲಾ ಶಾಲಾ ಮುಖ್ಯಸ್ಥರು ಮತ್ತು ಪೋಷಕರಿಗೆ ತಮ್ಮ ಮಕ್ಕಳನ್ನು ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೊತ್ಸಾಹಿಸುವಂತೆ ನಾವು ಈ ಮೂಲಕ ವಿನಂತಿಸುತ್ತಿದ್ದೇವೆ.