News Karnataka Kannada
Monday, April 29 2024
ಮಂಗಳೂರು

ಮಂಗಳೂರು: ವಿವಿ ಘಟಕ ಕಾಲೇಜಿನ ಹಿಜಾಬ್ ವಿವಾದ

Mngl
Photo Credit : R Bhat

ಮಂಗಳೂರು: ವಿವಿ ಘಟಕ ಕಾಲೇಜಿನ ಹಿಜಾಬ್ ವಿವಾದ ಬಗೆ ಹರಿಸಲು ಹಿಜಾಬ್ ವಿದ್ಯಾರ್ಥಿನಿಯರು ಎರಡು ದಿ‌ನಗಳ ಗಡುವು ನೀಡಿದ್ದು, ಸಮಸ್ಯೆ ಪರಿಹರಿಸದೇ ಇದ್ದಲ್ಲಿ ಜಿಲ್ಲೆಯಾದ್ಯಂತ ಬೃಹತ್ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ವಿವಿ ಕಾಲೇಜು ಹಿಜಾಬ್ ವಿವಾದ ಸಂಬಂಧ ವಿದ್ಯಾರ್ಥಿನಿಯರ ಸುದ್ದಿಗೋಷ್ಟಿಯಲ್ಲಿ ಹಿಜಾಬ್ ವಿದ್ಯಾರ್ಥಿನಿ ಗೌಸಿಯಾ ಮಾತನಾಡಿ ‘ಈ ಹಿಂದೆ ವಿವಿ ಕಾಲೇಜಿನಲ್ಲಿ ಯಾವುದೇ ಹಿಜಾಬ್ ಸಮಸ್ಯೆ ಇರಲಿಲ್ಲ ಹೈ ಕೋರ್ಟ್ ಆದೇಶದ ಬಳಿಕವೂ ನಾವು ಹಿಜಾಬ್ ಹಾಕಿಕೊಂಡು ಹೋಗಿದ್ದೇವೆ ಆದರೆ ಕೆಲ ದಿನಗಳ ಬಳಿಕ ರಾತ್ರೋರಾತ್ರಿ ಈ ಸಮಸ್ಯೆ ಆರಂಭವಾಗಿದೆ.

ಈ ವಿಚಾರದಲ್ಲಿ ನಾವು ಹಲವು ಬಾರಿ ವಿವಿ ಕುಲಪತಿ ಬಳಿಗೆ ಹೋಗಿದ್ದೆವು  ಆಗ ವಿವಿಯವರು ಡಿಸಿ ಬಳಿ ಕೋರ್ಟ್ ಆದೇಶದ ಸ್ಪಷ್ಟನೆ ಲೆಟರ್ ತನ್ನಿ ಅಂದ್ರು  ಹೀಗಾಗಿ ನಾವು ಡಿಸಿ ಬಳಿಗೆ ಹೋಗಿದ್ದೆವು,  ಆ ಬಳಿಕ ಮತ್ತೆ ಕಾಲೇಜಿಗೆ ಹೋದಾಗ ನಮ್ಮನ್ನ ಹೊರಗೆ ಹಾಕಿದ್ದಾರೆ.  ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕುವ ಬೆದರಿಕೆ ಹಾಕಿದ್ದರು.  ಆಗ ಪ್ರಾಂಶುಪಾಲರು ನಮ್ಮ ಪ್ರವೇಶ ನಿರ್ಬಂಧ ಮಾಡಿ ಆದೇಶ ಮಾಡಿದ್ರು ಹೀಗಾಗಿ ನಾವು ಲೈಬ್ರೆರಿಗೆ ಹೋಗಿ ಹೊರಗೆ ಕೂತೆವು. ಆ ಬಳಿಕ ನಮ್ಮನ್ನ ಹಿಜಾಬ್ ಧರಿಸಿ ಕ್ಯಾಂಪಸ್ ಪ್ರವೇಶಕ್ಕೂ ಅನುಮತಿ ನಿರಾಕರಿಸಲಾಯ್ತು ಎಬಿವಿಪಿ ಪ್ರತಿಭಟನೆ ಬಳಿಕ ನಮ್ಮನ್ನ ಕ್ಯಾಂಪಸ್ ನಿಂದಲೂ ಹೊರಗೆ ಹಾಕಿದ್ರು ಆ ಬಳಿಕ ನಾವು ಸೋಮವಾದ ಜಿಲ್ಲಾಧಿಕಾರಿಯವ್ರನ್ನ ಭೇಟಿಯಾದೆವು ನಮ್ಮ ಜೊತೆಗೆ ನಮ್ಮ ಪೋಷಕರು ಕೂಡ ಮನವಿ ಮಾಡಿದ್ದಾರೆ.

ನಮ್ಮ ಮನವಿ ಇಷ್ಟೇ, ಕಾಲೇಜಿನ ಹಳೆಯ ವಸ್ತ್ರ ಸಂಹಿತೆ ಮುಂದುವರೆಸಿ ಈ ಶೈಕ್ಷಣಿಕ ವರ್ಷ ಹಳೆಯ ವಸ್ತ್ರ ಸಂಹಿತೆ ದಯವಿಟ್ಟು ಮುಂದುವರೆಸಿ ನಾವು ಹಿಂದಿನಿಂದಲೂ ಸಮವಸ್ತ್ರದ ಶಾಲನ್ನು ಹಿಜಾಬ್ ಆಗಿ ಧರಿಸಿ ಬರ್ತಾ ಇದೀವಿ ಕಾಲೇಜಿನ ಈ ಆದೇಶದ ಹಿಂದೆ ಹೈ ಕೋರ್ಟ್ ಆದೇಶ ಇಲ್ಲ ಬದಲಾಗಿ ಎಬಿವಿಪಿ ಒತ್ತಡದಿಂದಲೇ ಪ್ರಾಂಶುಪಾಲರು ಈ ಆದೇಶ ಮಾಡಿದ್ದಾರೆ.  ಇದರ ಬಗ್ಗೆ ಕಾನೂನು ಹೋರಾಟ ಮಾಡಿದ್ರೆ ತುಂಬಾ ಸಮಯ ತೆಗೆದುಕೊಳ್ಳುತ್ತದೆ ಎಂದರು .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು